ಜಲ ಸಂರಕ್ಷಣೆಗಾಗಿ ಮಮತಾ ಕಾಲು ನಡಿಗೆ ಜಾಥಾ
ಕೋಲ್ಕತಾ 12: ನೀರಿನ ಸಂರಕ್ಷಣೆ ಹಾಗೂ , ಮಿತ ಬಳಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೆಲವು ,ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು, ಕಾಲು ನಡಿಗೆ ಜಾಥಾ ಮಾಡಿ ನೀರು ಉಳಿಸುವ ದಿನಕ್ಕೆ ಚಾಲನೆ ನೀಡಲಿದ್ದಾರೆ.
ಈ ಆಚರಣೆಯು ನೀರಿನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಮಧ್ಯಾಹ್ನ 3 ಗಂಟೆಗೆ ಜೋರಸಂಕೊದಿಂದ ಪ್ರಾರಂಭವಾಗುವ ಜಾಥಾ ಮಾಯೋ ರಸ್ತೆಯಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಮುಂದುವರಿಯಲಿದೆ ಇದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ.
ಮಳೆನೀರನ್ನು ಕುಡಿಯುವ ನೀರಾಗಿ ಪರಿವರ್ತಿಸುವುದು ಈ ಯೋಜನೆಯ ಹಿಂದಿನ ಮೂಲ ಉದ್ದೇಶವಾಗಿದೆ. ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಈ ಯೋಜನೆ ಪ್ರಾಯೋಗಿಕ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಖ್ಯಾತ ವಿಜ್ಞಾನಿ ಡಾ ಎಸ್ ಪಿ ಗೊನ್ ಚೌಧುರಿ ಅವರು ಪರಿಣತಿ ಮಾಹಿತಿ ನೀಡಲಿದ್ದಾರೆ. ಟ್ಯಾಂಕ್ಗಳಲ್ಲಿ ಸಂಗ್ರಹಿಸಿದ ಮಳೆನೀರನ್ನು ಸೌರಶಕ್ತಿಯ ಮೇಲೆ ಚಲಿಸುವ ಪಂಪ್ಗಳನ್ನು ಬಳಸಿ ಮೇಲ್ಚಾವಣಿಯ ಟ್ಯಾಂಕ್ಗಳಿಗೆ ಸಾಗಿಸಲಾಗುತ್ತದೆ. ಮುಂದಿನ ಎರಡು ತಿಂಗಳಲ್ಲಿ ಈ ಯೋಜನೆಯನ್ನು ಆರಂಭದಲ್ಲಿ ದಕ್ಷಿಣ 24 ಪರಗಣಗಳಲ್ಲಿ ಎರಡು ಹಳ್ಳಿಗಳು ಮತ್ತು ಎರಡು ಶಾಲೆಗಳಲ್ಲಿ ಪ್ರಾರಂಭಿಸಲಾಗುವುದು . ಹೆಚ್ಚು ಯಶಸ್ವಿಯಾದ 'ಜಲ ಧಾರೋ, ಜಲ ಭಾರೋ' ಯೋಜನೆಯು ಮುಂದಿನ ಒಂದು ವರ್ಷದೊಳಗೆ ರಾಜ್ಯ ಸಕರ್ಾರದ ಪ್ರಯತ್ನದ ಭಾಗವಾಗಿ ಇನ್ನೂ 15 ಪುರಸಭೆಗಳ ವ್ಯಾಪ್ತಿಗೆ ಸೇರಲಿದೆ. ನೀರನ್ನು ಉಳಿಸಲು ಕೊಳಗಳನ್ನು ಅಗೆಯುವ ಬಗ್ಗೆ ಹೆಚ್ಚಿನ ಒತ್ತಡ ಹೇರಿದ ಎಂ.ಎಸ್. ಬ್ಯಾನರ್ಜಿ ಯವರ ಮೆದುಳಿನ ಕೂಸು ಜಲ್ ಧರೋ, ಜಲ್ ಭಾರೋ. ನೀರನ್ನು ಮುಖ್ಯವಾಗಿ ಕೃಷಿ ಮತ್ತು ಮೀನುಗಾರಿಕೆಗೆ ಬಳಸಲಾಗುತ್ತದೆ. ಈ ಯೋಜನೆಯನ್ನು 2011 ರಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರವು ಕಳೆದ ಎಂಟು ವರ್ಷಗಳಲ್ಲಿ "ಜಲ್ ಧರೋ ಜಲ ಭಾರೋ" ಎಂಬ ನೀರಿನ ಸಂರಕ್ಷಣಾ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 