ಕಟ್ಟಡ ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮಾನೆ ಸೂಚನೆ
Mane instructed to complete the construction work within the stipulated time frame
ಕಟ್ಟಡ ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮಾನೆ ಸೂಚನೆ
ಹಾನಗಲ್ 14: ತಾಲೂಕಿನಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಕೈಗೊಂಡಿರುವ ನಾನಾ ಕಟ್ಟಡ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜನೀಯರ್ ಹುಸೇನಬಿ ಅವರಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ಇಲ್ಲಿನ ಕರ್ನಾಟಕ ಗೃಹ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಾಮಗಾರಿ ಪ್ರಗತಿ ಹಾಗೂ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡುವ ಮೂಲಕ ನಿಗಾ ವಹಿಸಬೇಕು. ಹೊಸದಾಗಿ ಮಂಜೂರಿಯಾಗಿರುವ ಕಾಮಗಾರಿಗಳನ್ನು ಬೇಗ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದರು.ಸ್ಥಳ ಗುರುತಿಸಲು ಸಮಸ್ಯೆ ಇರುವಂಥ ನಿವೇಶನಗಳನ್ನು ಆದಷ್ಟು ಬೇಗ ಅಳತೆ ಮಾಡಿಕೊಂಡು ಕಾಮಗಾರಿ ಆರಂಭಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ಸಲ್ಲದು. ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿರುವ ಹಾನಗಲ್ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮೊದಲ ಮಹಡಿ ನಿರ್ಮಾಣದ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ದೊರಕಿಸುವಂತೆ ಶಾಸಕ ಮಾನೆ ಸೂಚಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 