ಇಂದಿರಾ ಕ್ಯಾಂಟೀನ ಪ್ರಾರಂಭಕ್ಕೆ ಮಣ್ಣಣ್ಣವರ ಆಗ್ರಹ
Mannanna's demand for the opening of Indira Canteen
ಇಂದಿರಾ ಕ್ಯಾಂಟೀನ ಪ್ರಾರಂಭಕ್ಕೆ ಮಣ್ಣಣ್ಣವರ ಆಗ್ರಹ
ಶಿಗ್ಗಾವಿ 05 : ಕಾಂಗ್ರೆಸ್ ಸರ್ಕಾರದ ಬಹು ನೀರೀಕ್ಷಿತ ಯೋಜನೆಯಲ್ಲಿ ಬಡವರ ಕೂಲಿ ಕಾರ್ಮಿಕರ ಕಾಮಧೇನು ಇಂದಿರಾ ಕ್ಯಾಂಟೀನ್ ಸಹ ಪ್ರಮುಖವಾಗಿದೆ ಪಟ್ಟಣದ ನೂತನ ಬಸ್ ನಿಲ್ದಾಣದಲ್ಲಿ ನಮ್ಮ ಸರ್ಕಾರ ಬಂದ ನಂತರ ಕಾರ್ಯ ಪ್ರಗತಿಯಲ್ಲಿದ್ದು ಪುರಸಭೆಯ ಮುಖ್ಯಾಧಿಕಾರಿಗಳು ಕ್ಯಾಂಟೀನ್ ಸುತ್ತಮುತ್ತಲು ಬೇಲಿ ಅಳವಡಿಸಿ ಕೈ ಬಿಟ್ಟರೆ ಸಾಲದು ಶಾಸಕರಾದ ಯಾಶೀರ್ ಅಹ್ಮದಖಾನ್ ಪಠಾನವರು ಈ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದು ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ ಉಳಿದ ಕಾಮಗಾರಿಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಏಜೆನ್ಸಿಯ ಜೊತೆ ಸಂಪರ್ಕ ಮಾಡಿ ಆದಷ್ಟು ಬೇಗನೆ ಕ್ಯಾಂಟೀನ್ ಪ್ರಾರಂಭಕ್ಕೆ ಕ್ರಮವಹಿಸಬೇಕು ನಿರ್ಲಕ್ಷ್ಯ ಧೋರಣೆ ಸರಿಯಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಪುರಸಭೆಯ ಮುಖ್ಯ ಅಧಿಕಾರಿಗಳು ಕುಂಟು ನೆಪಹೇಳದೆ ಎಚ್ಚೆತ್ತುಕೊಳ್ಳಬೇಕು ಜೊತೆಗೆ ಜಿಲ್ಲಾಧಿಕಾರಿಗಳು ಕೂಡಲೇ ಕ್ಯಾಂಟೀನ್ ಪ್ರಾರಂಭಕ್ಕೆ ಗಮನ ಹರಿಸುವಂತೆ ಕಾಂಗ್ರೆಸ್ ಪಕ್ಷದ ತಾಲೂಕ ವಕ್ತಾರ ಮಂಜುನಾಥ ಮಣ್ಣಣ್ಣವರ ಆಗ್ರಹಿಸಿದ್ದಾರೆ.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 