ಜಾತಿ ಧರ್ಮ ಮೀರಿ ಸಂಭ್ರಮಿಸಿದ ಮಾರಿಕಾಂಬಾ ಜಾತ್ರಾ ಮಹೋತ್ಸವ
Marikamba Jatra festival celebrated across caste and religion
ಮುಂಡಗೋಡ 09: ಪಟ್ಟಣದ ಆರಾಧ್ಯ ದೇವತೆ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ, ಶ್ರದ್ಧೆ ಹಾಗೂ ಸಾಮಾಜಿಕ ಭಾವೈಕತೆಯೊಂದಿಗೆ ಅದ್ಧೂರಿಯಾಗಿ ನೆರವೇರಿತು. ಜಾತ್ರೆಯಲ್ಲಿ ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ವರ್ಗದ ಜನರು ಒಂದಾಗಿ ಪಾಲ್ಗೊಂಡು, ಸೌಹಾರ್ದತೆಯ ಸ್ಪಷ್ಟ ಸಂದೇಶವನ್ನು ಸಾರಿದರು. ದೂರದೂರಿನಿಂದ ಆಗಮಿಸಿದ ಭಕ್ತರು ದೇವಿಯ ದರ್ಶನ ಪಡೆದು ಮಕ್ಕಳು, ಯುವಕರು, ಹಿರಿಯರು ಎನ್ನದೇ ಎಲ್ಲರೂ ಜಾತ್ರೆಯ ಸಂಭ್ರಮದಲ್ಲಿ ತೊಡಗಿಕೊಂಡಿದ್ದು, ಮುಂಡಗೋಡ ಪಟ್ಟಣವೇ ಹಬ್ಬದ ವಾತಾವರಣದಲ್ಲಿ ರಂಗೇರಿತ್ತು. ಜಾತ್ರೆ ಸಮಯದಲ್ಲಿ ವ್ಯಾಪಾರ ಮಳಿಗೆಗಳು, ಆಹಾರ ಮಳಿಗೆಗಳು ಮತ್ತು ಮನರಂಜನಾ ಆಟಿಕೆಗಳು ಜನರನ್ನು ಆಕರ್ಷಿಸಿತು. ಶಾಂತಿ, ಸೌಹಾರ್ದ ಮತ್ತು ಸಹಬಾಳ್ವೆಯ ಪ್ರತೀಕವಾಗಿ ಮಾರಿಕಾಂಬಾ ಜಾತ್ರಾ ಮಹೋತ್ಸವವು ಭಾವೈಕತೆಯ ಹಬ್ಬವಾಗಿ ಮೂಡಿ,ಸಮಾಜದ ಏಕತೆಗೆ ಮತ್ತಷ್ಟು ಬಲ ತುಂಬಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 