ಜಾತಿ ಧರ್ಮ ಮೀರಿ ಸಂಭ್ರಮಿಸಿದ ಮಾರಿಕಾಂಬಾ ಜಾತ್ರಾ ಮಹೋತ್ಸವ
Marikamba Jatra festival celebrated across caste and religion
ಮುಂಡಗೋಡ 09: ಪಟ್ಟಣದ ಆರಾಧ್ಯ ದೇವತೆ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ, ಶ್ರದ್ಧೆ ಹಾಗೂ ಸಾಮಾಜಿಕ ಭಾವೈಕತೆಯೊಂದಿಗೆ ಅದ್ಧೂರಿಯಾಗಿ ನೆರವೇರಿತು. ಜಾತ್ರೆಯಲ್ಲಿ ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ವರ್ಗದ ಜನರು ಒಂದಾಗಿ ಪಾಲ್ಗೊಂಡು, ಸೌಹಾರ್ದತೆಯ ಸ್ಪಷ್ಟ ಸಂದೇಶವನ್ನು ಸಾರಿದರು. ದೂರದೂರಿನಿಂದ ಆಗಮಿಸಿದ ಭಕ್ತರು ದೇವಿಯ ದರ್ಶನ ಪಡೆದು ಮಕ್ಕಳು, ಯುವಕರು, ಹಿರಿಯರು ಎನ್ನದೇ ಎಲ್ಲರೂ ಜಾತ್ರೆಯ ಸಂಭ್ರಮದಲ್ಲಿ ತೊಡಗಿಕೊಂಡಿದ್ದು, ಮುಂಡಗೋಡ ಪಟ್ಟಣವೇ ಹಬ್ಬದ ವಾತಾವರಣದಲ್ಲಿ ರಂಗೇರಿತ್ತು. ಜಾತ್ರೆ ಸಮಯದಲ್ಲಿ ವ್ಯಾಪಾರ ಮಳಿಗೆಗಳು, ಆಹಾರ ಮಳಿಗೆಗಳು ಮತ್ತು ಮನರಂಜನಾ ಆಟಿಕೆಗಳು ಜನರನ್ನು ಆಕರ್ಷಿಸಿತು. ಶಾಂತಿ, ಸೌಹಾರ್ದ ಮತ್ತು ಸಹಬಾಳ್ವೆಯ ಪ್ರತೀಕವಾಗಿ ಮಾರಿಕಾಂಬಾ ಜಾತ್ರಾ ಮಹೋತ್ಸವವು ಭಾವೈಕತೆಯ ಹಬ್ಬವಾಗಿ ಮೂಡಿ,ಸಮಾಜದ ಏಕತೆಗೆ ಮತ್ತಷ್ಟು ಬಲ ತುಂಬಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 