ಅದ್ದೂರಿಯಾಗಿ ಮರುಳಸಿದ್ದೇಶ್ವರ ಪಲ್ಲಕ್ಕಿ, ನಂದಿಕೋಲ ಉತ್ಸವ
Marulasiddheshwara palanquin, Nandikol festival in grand style
ಇಂಡಿ 19: ತಾಲ್ಲಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಮರುಳಸಿದ್ದೇಶ್ವರ ಎಳ್ಳ ಅಮಾವಾಸಿ ನಿಮಿತ್ತವಾಗಿ ಪಲ್ಲಕ್ಕಿ ಹಾಗೂ ನಂದಿಕೋಲ ಉತ್ಸವ ಅದ್ದೂರಿಯಾಗಿ ನಡೆಯಿತು. ಪ್ರತಿ ವರ್ಷದಂತೆ ಮರುಳಸಿದ್ದೇಶ್ವರ ಪಲ್ಲಕ್ಕಿಯು ಹಾಗೂ ನಂದಿಕೋಲು ಮೆರವಣಿಗೆ ಗ್ರಾಮದ ಮೂಲ ದೇವಾಲಯದಿಂದ ವಾದ್ಯ ಸಂಗೀತ ನೃತ್ಯ ವೈಭವದ್ದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮದ ಹೊರವಲಯದಲ್ಲಿ ಇರುವ ಕಡೆಗುಡಿ ತಲುಪಿತು. ಅಲ್ಲಿ ನೆಲೆಸಿರುವ ಮರುಳಸಿದ್ದೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ತಡವಲಗಾ ಗ್ರಾಮಕ್ಕೆ ಮರಳಿ ಬಂದು ಬಲಭೀಮ ದೇವಾಲಯದಲ್ಲಿ ವಾಸ್ತವ್ಯ ಇರುವುದು. ರಾತ್ರಿ ಇಡಿ ಭಕ್ತರಿಂದ ಭಜನೆ ಹಾಗೂ ಜಾಗರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಾಗೂ ಎಳ್ಳು ಅಮವಾಸ್ಯೆಗೆ ರೈತ ಕುಟುಂಬಗಳಲ್ಲಿ ವಾರಗಟ್ಟಲೆ ಮೊದಲು ಎಳ್ಳು ಹೋಳಿಗೆ, ಎಣ್ಣಿ ಹೋಳಿಗೆ, ಶೇಂಗಾ ಹೋಳಿಗೆ, ಸಜ್ಜಿ ರೊಟ್ಟಿ, ಜೋಳದ ಖಡಕ್ ರೊಟ್ಟಿ, ಕರ್ಚಿಕಾಯಿ, ಕಾಳು ಪಲ್ಯೆ, ವಿವಿಧ ಬಗೆಯ ಚಟ್ನಿ, ಮೊಸರು ಹೀಗೆ ಬಗೆ ಬಗೆಯ ಭಕ್ಷಗಳನ್ನು ತಯಾರಿಸಿ ಅಮವಾಸ್ಯೆ ದಿನ ಎತ್ತಿನ ಬಂಡಿ, ಟಂಟಂ, ಟ್ರ್ಯಕ್ಟರ್ಗಳಲ್ಲಿ ಮನೆಯ ಸದಸ್ಯರ ಜೊತೆಗೆ ಸ್ನೇಹಿತರು, ಬಂಧುಗಳನ್ನು ಕರೆದುಕೊಂಡು ಹೊಲಕ್ಕೆ ಹೋಗಿ, ಹೊಲದಲ್ಲಿ ಸಮೃದ್ಧವಾಗಿ ಬೆಳೆದ ಬಿಳಿಜೋಳ, ಕಡಲೆ, ಕುಸುಬಿ, ಗೋಧಿ ಫೈರಿನ ಮಧ್ಯದಲ್ಲಿ ಬನ್ನಿ ಗಿಡದ ಹತ್ತಿರ ಐದು ಕಲ್ಲುಗಳಿಗೆ ಸುಣ್ಣ ಹಚ್ಚಿ ಪಂಚ ಪಾಂಡವರನ್ನು ಮಾಡಿ ಪೂಜೆ ಸಲ್ಲಿಸುತ್ತಾರೆ. ಎಲ್ಲ ಬಗೆಯ ತಿನಿಸುಗಳ ತುಣುಕನ್ನು ಒಂದು ಪಾತ್ರೆಯಲ್ಲಿ ಹಾಕಿಕೊಂಡು ಮುಂದೆ ಒಬ್ಬರು ತಿನಿಸುಗಳ ತುಣುಕನ್ನು ಹೊಲದಲ್ಲಿ ಚೆಲ್ಲಿ ಬಲೋರೇ ಬಲೋ ಚೊಂಗೆ ಬಲೋ ಎನ್ನುತ್ತಾರೆ ಇದು ಆದಿ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ ಎಂದು ಹೇಳುತ್ತಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 