ದುಂದು ವೆಚ್ಚದ ಆಡಂಬರಕ್ಕಿಂತ ಸಾಮೂಹಿಕ ವಿವಾಹ ಉತ್ತಮ : ಶಿವಕುಮಾರ ಸ್ವಾಮೀಜಿ
Mass marriage is better than extravagant pomp and show: Shivakumara Swamiji
ಧಾರವಾಡ 09: ಬಡ ವರ್ಗದ ಜನರು ಸಾಲ ಸೋಲ ಮಾಡಿ ಆಡಂಬರಕ್ಕಾಗಿ ಮದುವೆಗೆ ಹೆಚ್ಚು ಖರ್ಚು ಮಾಡಬಾರದು. ಅದರ ಬದಲು ಮಠಗಳಲ್ಲಿ ಆಯೋಜಿಸುವ ಇಂಥ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳಬೇಕು ಎಂದು ನರಗುಂದ ವಿರಕ್ತಮಠದ ಶಿವಕುಮಾರ ಸ್ವಾಮೀಜಿ ಹೇಳಿದರು. ಇಲ್ಲಿನ ರಾಜೀವಗಾಂಧಿ ನಗರದಲ್ಲಿರುವ ಅಲ್ಲೀಪುರ ಮಹಾದೇವ ತಾತನವರ ಮಠದಲ್ಲಿ ತಾತನವರ 38ನೇ ವರ್ಷದ ಪುಣ್ಯಾರಾಧನೆ ಅಂಗವಾಗಿ ಭಾನುವಾರ ಏರಿ್ಡಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
ಅಲ್ಲೀಪುರ ಮಹಾದೇವ ತಾತನವರು ಭಕ್ತರ ಉದ್ಧಾರಕ್ಕಾಗಿಯೇ ಜನಿಸಿದ ಶಿವಯೋಗಿ ಸಾಮ್ರಾಟರು. ಅವರು ನೆಲೆಸಿದ್ದ ಇಂಥ ಪುಣ್ಯಭೂಮಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವ ದಂಪತಿ ನಿಜವಾಗಿ ಪುಣ್ಯವಂತರು. ದಂಪತಿ ಜೀವನದಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದರು. ಹುಬ್ಬಳ್ಳಿ ವಾಣಿಜ್ಯತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತ ಗೋವಿಂದಪ್ಪ ಗೌಡಪ್ಪಗೋಳ ಮಾತನಾಡಿ, ಸಮಾಜದಲ್ಲಿ ದುಷ್ಟ ಶಕ್ತಿಗಳನ್ನು ದಮನ ಮಾಡಿ, ಶಿಷ್ಟರ ರಕ್ಷಣೆಗಾಗಿ ಸಾಕ್ಷಾತ್ ಶಿವನು ಅಲ್ಲೀಪುರ ಮಹಾದೇವ ತಾತನವರ ರೂಪದಲ್ಲಿ ಬಂದು ಭಕ್ತರನ್ನು ಉದ್ಧರಿಸಿದ್ದಾನೆ.
ತಾತನ ಲೀಲಾ ಪವಾಡಗಳು ಅನೇಕ. ತಾತನ ನಾಮ ಸ್ಮರಣೆಯಿಂದಲೇ ಅನೇಕ ಕಷ್ಟಗಳು ದೂರವಾಗುತ್ತವೆ ಎಂದರು. ಸಾಮೂಹಿಕ ವಿವಾಹದಲ್ಲಿ 21 ಜೋಡಿ ನವ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಲತಾ ಆನೆಗುಂದಿ ಪ್ರಾರ್ಥಿಸಿದರು. ಸಂತೋಷ ಆನೆಗುಂದಿ, ಸಿದ್ಧಲಿಂಗಪ್ಪ ಹೊಸಕೇರಿ ಕಾರ್ಯಕ್ರಮ ನಿರ್ವಹಿಸಿದರು. ಚಂದ್ರಣ್ಣ ಬೆಳಗಾವಿ, ಮಂಜುನಾಥ ಬೆಳಗಾವಿ, ಈರಣ್ಣ ಆಕಳವಾಡಿ, ಶಂಕರ ಕುಂಬಿ, ಮಠದ ಭಕ್ತರು ಉಪಸ್ಥಿತರಿದ್ದರು. ತಾತನ ಮೂರ್ತಿಗೆ ರುದ್ರಾಭಿಷೇಕ: ಭಾನುವಾರ ಬೆಳಗ್ಗೆ 5ಕ್ಕೆ ತಾತನವರ ಗದ್ದುಗೆಗೆ ರುದ್ರಾಭಿಷೇಕ. ನಂತರ ಅಗ್ನಿಕುಂಡ ಕಾರ್ಯಕ್ರಮ. ಪಲ್ಲಕ್ಕಿಉತ್ಸವ, ಆರಾಧನಾ ಮಹೋತ್ಸವ ಜರುಗಿದವು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 