ದುಂದು ವೆಚ್ಚದ ಆಡಂಬರಕ್ಕಿಂತ ಸಾಮೂಹಿಕ ವಿವಾಹ ಉತ್ತಮ : ಶಿವಕುಮಾರ ಸ್ವಾಮೀಜಿ
Mass marriage is better than extravagant pomp and show: Shivakumara Swamiji
ಧಾರವಾಡ 09: ಬಡ ವರ್ಗದ ಜನರು ಸಾಲ ಸೋಲ ಮಾಡಿ ಆಡಂಬರಕ್ಕಾಗಿ ಮದುವೆಗೆ ಹೆಚ್ಚು ಖರ್ಚು ಮಾಡಬಾರದು. ಅದರ ಬದಲು ಮಠಗಳಲ್ಲಿ ಆಯೋಜಿಸುವ ಇಂಥ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳಬೇಕು ಎಂದು ನರಗುಂದ ವಿರಕ್ತಮಠದ ಶಿವಕುಮಾರ ಸ್ವಾಮೀಜಿ ಹೇಳಿದರು. ಇಲ್ಲಿನ ರಾಜೀವಗಾಂಧಿ ನಗರದಲ್ಲಿರುವ ಅಲ್ಲೀಪುರ ಮಹಾದೇವ ತಾತನವರ ಮಠದಲ್ಲಿ ತಾತನವರ 38ನೇ ವರ್ಷದ ಪುಣ್ಯಾರಾಧನೆ ಅಂಗವಾಗಿ ಭಾನುವಾರ ಏರಿ್ಡಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
ಅಲ್ಲೀಪುರ ಮಹಾದೇವ ತಾತನವರು ಭಕ್ತರ ಉದ್ಧಾರಕ್ಕಾಗಿಯೇ ಜನಿಸಿದ ಶಿವಯೋಗಿ ಸಾಮ್ರಾಟರು. ಅವರು ನೆಲೆಸಿದ್ದ ಇಂಥ ಪುಣ್ಯಭೂಮಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವ ದಂಪತಿ ನಿಜವಾಗಿ ಪುಣ್ಯವಂತರು. ದಂಪತಿ ಜೀವನದಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದರು. ಹುಬ್ಬಳ್ಳಿ ವಾಣಿಜ್ಯತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತ ಗೋವಿಂದಪ್ಪ ಗೌಡಪ್ಪಗೋಳ ಮಾತನಾಡಿ, ಸಮಾಜದಲ್ಲಿ ದುಷ್ಟ ಶಕ್ತಿಗಳನ್ನು ದಮನ ಮಾಡಿ, ಶಿಷ್ಟರ ರಕ್ಷಣೆಗಾಗಿ ಸಾಕ್ಷಾತ್ ಶಿವನು ಅಲ್ಲೀಪುರ ಮಹಾದೇವ ತಾತನವರ ರೂಪದಲ್ಲಿ ಬಂದು ಭಕ್ತರನ್ನು ಉದ್ಧರಿಸಿದ್ದಾನೆ.
ತಾತನ ಲೀಲಾ ಪವಾಡಗಳು ಅನೇಕ. ತಾತನ ನಾಮ ಸ್ಮರಣೆಯಿಂದಲೇ ಅನೇಕ ಕಷ್ಟಗಳು ದೂರವಾಗುತ್ತವೆ ಎಂದರು. ಸಾಮೂಹಿಕ ವಿವಾಹದಲ್ಲಿ 21 ಜೋಡಿ ನವ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಲತಾ ಆನೆಗುಂದಿ ಪ್ರಾರ್ಥಿಸಿದರು. ಸಂತೋಷ ಆನೆಗುಂದಿ, ಸಿದ್ಧಲಿಂಗಪ್ಪ ಹೊಸಕೇರಿ ಕಾರ್ಯಕ್ರಮ ನಿರ್ವಹಿಸಿದರು. ಚಂದ್ರಣ್ಣ ಬೆಳಗಾವಿ, ಮಂಜುನಾಥ ಬೆಳಗಾವಿ, ಈರಣ್ಣ ಆಕಳವಾಡಿ, ಶಂಕರ ಕುಂಬಿ, ಮಠದ ಭಕ್ತರು ಉಪಸ್ಥಿತರಿದ್ದರು. ತಾತನ ಮೂರ್ತಿಗೆ ರುದ್ರಾಭಿಷೇಕ: ಭಾನುವಾರ ಬೆಳಗ್ಗೆ 5ಕ್ಕೆ ತಾತನವರ ಗದ್ದುಗೆಗೆ ರುದ್ರಾಭಿಷೇಕ. ನಂತರ ಅಗ್ನಿಕುಂಡ ಕಾರ್ಯಕ್ರಮ. ಪಲ್ಲಕ್ಕಿಉತ್ಸವ, ಆರಾಧನಾ ಮಹೋತ್ಸವ ಜರುಗಿದವು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 