ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಸಮಾವೇಶ: ಶಾಸಕ ಯತ್ನಾಳ್ ಸೇರಿದಂತೆ ಹಲವು ಮುಖಂಡರು ಭಾಗಿ
Mass rally demanding 2A reservation for Panchmasali Society
ಬೆಳಗಾವಿ 10: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ಸುವರ್ಣ ವಿಧಾನಸೌಧದ ಬಳಿ ಬೃಹತ್ ಸಮಾವೇಶದ ಸ್ಟಳಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗಮಿಸುತ್ತಿದ್ದಂತೆ ‘ಹುಲಿ ಬಂತು ಹುಲಿ...’ ಎಂದು ಜನ ಘೋಷಣೆ ಮೊಳಗಿಸಿದರು.
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಶಾಸಕರಾದ ರಾಜು ಕಾಗೆ, ಅರವಿಂದ ಬೆಲ್ಲದ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ಪಂಚಸೇನೆ ರಾಷ್ಟ್ರೀಯ ಅಧ್ಯಕ್ಷ ನಾಗರಾಜ ಹುಲಿ, ಮಾಜಿ ಸಚಿವ ಎ.ಬಿ.ಪಾಟೀಲ, ಸಿ.ಸಿ.ಪಾಟೀಲ, ರೋಹಿಣಿ ಪಾಟೀಲ, ಡಾ.ಮಹಾಂತೇಶ ಕಡಾಡಿ, ಮಾಜಿ ಸಂಸದ ಶಿವರಾಮೇಗೌಡ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರ ಮುಂದಾಳತ್ವದಲ್ಲಿ ಅಪಾರ ಸಂಖ್ಯೆಯ ಜನ ಸೇರಿದರು.
ರಾಜ್ಯದ ಬೇರೆ ಬೇರೆ ಕಡೆಯಿಂದ ಅಪಾರ ಸಂಖ್ಯೆಯ ಹೋರಾಟಗಾರರು ಸೇರಿದರು.
ಜೈ ಲಿಂಗಾಯತ, ಜೈ ಪಂಚಮಸಾಲಿ, ಜೈ ಬಸವೇಶ ಎಂಬ ಘೋಷಣೆಗಳು ನಿರಂತರ ಮೊಳಗಿದವು. ಕೇಸರಿ ಧ್ವಜ ಹಿಡಿದು, ಕೇಸರಿ ಶಲ್ಯ, ಹಸಿರು ಟವಲುಗಳನ್ನು ಹಾರಾಡಿಸಿ ಘೋಷಣೆ ಕೂಗಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಬೈಲಹೊಂಗಲ, ಹಿರೇಬಾಗೇವಾಡಿ, ಬಸ್ತವಾಡ, ಹಲಗಾ ಮುಂತಾದ ಕಡೆಗಳಲ್ಲಿ ಧಾವಿಸಿ ಬಂದ ಜನರನ್ನು ಪೊಲೀಸರು ಅಲ್ಲಲ್ಲಿ ತಡೆದರು. ಇದರಿಂದ ವೇದಿಕೆಯಲ್ಲಿ ಆಕ್ರೋಶ ವ್ಯಕ್ತವಾಯಿತು. ವೇದಿಕೆ ಮೇಲಿದ್ದ ಸ್ವಾಮೀಜಿ ಗುಡುಗಿದರು. ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡದೇ ಇದ್ದರೆ ಸುವರ್ಣ ಸೌಧಕ್ಕೆ ನುಗ್ಗುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಂತರ ಹೋರಾಟಗಾರರನ್ನು ಬಿಡುಗಡೆ ಮಾಡಲಾಯಿತು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 