ಮಾಸ್ಟರ್ ಹಿರಣ್ಣಯ್ಯರವರು ಕನ್ನಡ ನಾಡಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಗೋರಂಟ್ಲಿ
ಲೋಕದರ್ಶನ ವರದಿ
ಕೊಪ್ಪಳ 02: ಮಾಸ್ಟರ್ ಹಿರಣ್ಣಯ್ಯರವರು ಶ್ರೇಷ್ಠ ರಂಗಭೂಮಿ ಕಲಾವಿದರಾಗಿದ್ದರು. ರಂಗಭೂಮಿಗೆ ಹೊಸ ದಿಕ್ಕು ನೀಡಿದ್ದ ಅವರ ಅಗಲಿಕೆ ರಂಗಭೂಮಿ ಅಷ್ಟೆ ಅಲ್ಲದೇ ಕನ್ನಡ ನಾಡಿಗೆ ತುಂಬಲಾರದ ನಷ್ಟವೇಂದು ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಹೇಳಿದರು.
ಅವರು ತಾಲೂಕು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಸಾಹಿತ್ಯ ಪರಿಷತ್ತು ಕಾಯರ್ಾಲಯದಲ್ಲಿ ಹಮ್ಮಿಕೊಂಡಿದ್ದ ಸಂತಾಪ ಸಭೆಯಲ್ಲಿ ಮಾತನಾಡಿದರು.
ಅಂದಿನ ಕಾಲಘಟದಲ್ಲಿ ರಾಜಕೀಯ ಹಾಗೂ ಆಳುವ ಸರ್ಕಾರಗಳನ್ನು ರಂಗಭೂಮಿಯಲ್ಲಿ ವಿಡಂಬನೆ ಮಾಡುತ್ತಾ ಸಮಾಜದ ಅಂಕು-ಡೊಂಕುಗಳನ್ನ ತಿದ್ದಿದ್ದ ಮಹಾನ್ ಚೇತನ ಅವರಾಗಿದ್ದರು ಎಂದರು.
ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆವಹಿಸಿದ್ಧ ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಮಾತನಾಡಿ ಅವರ ಕಾಲಘಟದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದವರು. ಆಳುವ ಸಕರ್ಾರಕ್ಕೆ ತಮ್ಮ ರಂಗಭೂಮಿ ಮೂಲಕವೇ ಎಚ್ಚರಿಸಿದ ವೀರರು ಎಂದರು. ಜಿಲ್ಲಾ ಕಸಾಪ ಕೋಶಾಧ್ಯಕ್ಷ ಸಂತೋಷ ದೇಶಪಾಂಡೆ, ತಾಲೂಕು ಕಸಾಪ ಅಧ್ಯಕ್ಷ ಗೀರಿಶ ಪಾನಘಂಟಿ, ಕಾರ್ಯದಶರ್ಿ ರಮೇಶ ತುಪ್ಪದ, ರಂಗ ಕಲಾವಿದರು ಹಾಗೂ ಶಿಕ್ಷಕರಾದ ಪ್ರಾಣೇಶ ಪೂಜಾರ, ವೈಶಂಪಾಯ, ನ್ಯಾಯವಾದಿ ಬಸವರಾಜ, ಯಲಬುಗರ್ಾ ತಾಲೂಕು ಕಸಾಪ ಅಧ್ಯಕ್ಷ ದೇವೇಂದ್ರಪ್ಪ ಜಲರ್ಿ, ಶಿವಕುಮಾರ ಕುಕನೂರ ಶಿವಪ್ಪ ಹಡಪದ, ರಾಮಚಂದ್ರ ಗೊಂಡಬಾಳ ಇತರರು ಇದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 