ಮಾಸ್ಟರ್ ಹಿರಣ್ಣಯ್ಯರವರು ಕನ್ನಡ ನಾಡಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಗೋರಂಟ್ಲಿ
ಲೋಕದರ್ಶನ ವರದಿ
ಕೊಪ್ಪಳ 02: ಮಾಸ್ಟರ್ ಹಿರಣ್ಣಯ್ಯರವರು ಶ್ರೇಷ್ಠ ರಂಗಭೂಮಿ ಕಲಾವಿದರಾಗಿದ್ದರು. ರಂಗಭೂಮಿಗೆ ಹೊಸ ದಿಕ್ಕು ನೀಡಿದ್ದ ಅವರ ಅಗಲಿಕೆ ರಂಗಭೂಮಿ ಅಷ್ಟೆ ಅಲ್ಲದೇ ಕನ್ನಡ ನಾಡಿಗೆ ತುಂಬಲಾರದ ನಷ್ಟವೇಂದು ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಹೇಳಿದರು.
ಅವರು ತಾಲೂಕು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ವತಿಯಿಂದ ಸಾಹಿತ್ಯ ಪರಿಷತ್ತು ಕಾಯರ್ಾಲಯದಲ್ಲಿ ಹಮ್ಮಿಕೊಂಡಿದ್ದ ಸಂತಾಪ ಸಭೆಯಲ್ಲಿ ಮಾತನಾಡಿದರು.
ಅಂದಿನ ಕಾಲಘಟದಲ್ಲಿ ರಾಜಕೀಯ ಹಾಗೂ ಆಳುವ ಸರ್ಕಾರಗಳನ್ನು ರಂಗಭೂಮಿಯಲ್ಲಿ ವಿಡಂಬನೆ ಮಾಡುತ್ತಾ ಸಮಾಜದ ಅಂಕು-ಡೊಂಕುಗಳನ್ನ ತಿದ್ದಿದ್ದ ಮಹಾನ್ ಚೇತನ ಅವರಾಗಿದ್ದರು ಎಂದರು.
ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆವಹಿಸಿದ್ಧ ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಮಾತನಾಡಿ ಅವರ ಕಾಲಘಟದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದವರು. ಆಳುವ ಸಕರ್ಾರಕ್ಕೆ ತಮ್ಮ ರಂಗಭೂಮಿ ಮೂಲಕವೇ ಎಚ್ಚರಿಸಿದ ವೀರರು ಎಂದರು. ಜಿಲ್ಲಾ ಕಸಾಪ ಕೋಶಾಧ್ಯಕ್ಷ ಸಂತೋಷ ದೇಶಪಾಂಡೆ, ತಾಲೂಕು ಕಸಾಪ ಅಧ್ಯಕ್ಷ ಗೀರಿಶ ಪಾನಘಂಟಿ, ಕಾರ್ಯದಶರ್ಿ ರಮೇಶ ತುಪ್ಪದ, ರಂಗ ಕಲಾವಿದರು ಹಾಗೂ ಶಿಕ್ಷಕರಾದ ಪ್ರಾಣೇಶ ಪೂಜಾರ, ವೈಶಂಪಾಯ, ನ್ಯಾಯವಾದಿ ಬಸವರಾಜ, ಯಲಬುಗರ್ಾ ತಾಲೂಕು ಕಸಾಪ ಅಧ್ಯಕ್ಷ ದೇವೇಂದ್ರಪ್ಪ ಜಲರ್ಿ, ಶಿವಕುಮಾರ ಕುಕನೂರ ಶಿವಪ್ಪ ಹಡಪದ, ರಾಮಚಂದ್ರ ಗೊಂಡಬಾಳ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 