ಜಿ. ಎಚ್. ಕಾಲೇಜಿನಲ್ಲಿ ಗಣಿತ ವಿಶ್ಲೇಷಣೆ-ಅನ್ವಯಿಕೆ ಕಾರ್ಯಾಗಾರ
Mathematical Analysis-Application Workshop in G. H.College
ಹಾವೇರಿ 29: ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗ ವತಿಯಿಂದ "ವಿಶ್ಲೇಷಣೆ ಮತ್ತು ಗಣಿತದ ಅನ್ವಯಿಕೆಗಳು" (ಂಟಿಚಿಟಥಿ ಚಿಟಿಜ ಂಠಿಠಿಟಛಿಚಿಣಠ ಠ ಒಚಿಣಜಟಚಿಣಜಿ) ವಿಷಯದ ಮೇಲೆ ಒಂದು ದಿನದ ಗಣಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಗಣಿತ ವಿಷಯದ ಆಳವಾದ ಜ್ಞಾನವನ್ನು ಹಂಚಿಕೊಳ್ಳುವುದು ಮತ್ತು ಅದರ ವಿವಿಧ ಕ್ಷೇತ್ರಗಳಲ್ಲಿ ಅನ್ವಯಿಕೆಗಳನ್ನು ಚರ್ಚಿಸುವುದು ಮುಖ್ಯ ಉದ್ದೇಶವಾಗಿತ್ತು.
ಪದವಿ ಪ್ರಾಚಾರ್ಯೆ ಡಾ. ಸಂಧ್ಯಾ ಆರ್. ಕುಲಕರ್ಣಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕುಂಬಿನರಸಯ್ಯ ಎಸ್. ಹಾಗೂ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ ಕೆ. ಪಾಲ್ಗೊಂಡಿದ್ದರು. ಕಾರ್ಯಗಾರದಲ್ಲಿ ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಣಿತಶಾಸ್ತ್ರ ವಿಭಾಗದಮುಖ್ಯಸ್ಥೆ ಪ್ರೊ. ಜಿ. ಕೆ. ಮಂಕಣಿ ಸ್ವಾಗತಿಸಿದರು. ಪ್ರೊ. ಡಾ. ಅಶ್ವಿನಿ ಹತ್ತಿಕಾಳ ಪರಿಚಯಿಸಿದರು. ಗೀತಾ ಹೂಗಾರ ವಂದಿಸಿದರು. ಪ್ರಿಯದರ್ಶಿನಿ ಅಂಗಡಿ ಹಾಗೂ ಬೀಬಿ ಸೈದಾ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 