ಜಿ. ಎಚ್. ಕಾಲೇಜಿನಲ್ಲಿ ಗಣಿತ ವಿಶ್ಲೇಷಣೆ-ಅನ್ವಯಿಕೆ ಕಾರ್ಯಾಗಾರ
Mathematical Analysis-Application Workshop in G. H.College
ಹಾವೇರಿ 29: ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗ ವತಿಯಿಂದ "ವಿಶ್ಲೇಷಣೆ ಮತ್ತು ಗಣಿತದ ಅನ್ವಯಿಕೆಗಳು" (ಂಟಿಚಿಟಥಿ ಚಿಟಿಜ ಂಠಿಠಿಟಛಿಚಿಣಠ ಠ ಒಚಿಣಜಟಚಿಣಜಿ) ವಿಷಯದ ಮೇಲೆ ಒಂದು ದಿನದ ಗಣಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಗಣಿತ ವಿಷಯದ ಆಳವಾದ ಜ್ಞಾನವನ್ನು ಹಂಚಿಕೊಳ್ಳುವುದು ಮತ್ತು ಅದರ ವಿವಿಧ ಕ್ಷೇತ್ರಗಳಲ್ಲಿ ಅನ್ವಯಿಕೆಗಳನ್ನು ಚರ್ಚಿಸುವುದು ಮುಖ್ಯ ಉದ್ದೇಶವಾಗಿತ್ತು.
ಪದವಿ ಪ್ರಾಚಾರ್ಯೆ ಡಾ. ಸಂಧ್ಯಾ ಆರ್. ಕುಲಕರ್ಣಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕುಂಬಿನರಸಯ್ಯ ಎಸ್. ಹಾಗೂ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ ಕೆ. ಪಾಲ್ಗೊಂಡಿದ್ದರು. ಕಾರ್ಯಗಾರದಲ್ಲಿ ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಣಿತಶಾಸ್ತ್ರ ವಿಭಾಗದಮುಖ್ಯಸ್ಥೆ ಪ್ರೊ. ಜಿ. ಕೆ. ಮಂಕಣಿ ಸ್ವಾಗತಿಸಿದರು. ಪ್ರೊ. ಡಾ. ಅಶ್ವಿನಿ ಹತ್ತಿಕಾಳ ಪರಿಚಯಿಸಿದರು. ಗೀತಾ ಹೂಗಾರ ವಂದಿಸಿದರು. ಪ್ರಿಯದರ್ಶಿನಿ ಅಂಗಡಿ ಹಾಗೂ ಬೀಬಿ ಸೈದಾ ನಿರೂಪಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 