ಬದುಕು ಪರೋಪಕಾರದಿಂದ ಕೂಡಿರಲಿ-ಮುಂಡರಗಿ ಶ್ರೀ
May life be filled with philanthropy - Mundaragi Sri
ಅಳವಂಡಿ 12: ನಾವು ನಮ್ಮ ಬದುಕನ್ನು ಸ್ವಾರ್ಥದಿಂದ ಕಟ್ಟಿಹಾಕದೆ, ನಮ್ಮ ಕುಟುಂಬ, ಸಮಾಜ ಮತ್ತು ಇತರರ ಹಿತಕ್ಕಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ಅಳವಂಡಿ ಸಮೀಪದ ಬೆಟಗೇರಿ ಗ್ರಾಮದ ಮುಂಡರಗಿ ಅನ್ನದಾನೀಶ್ವರ ಶಾಖಾಮಠದ ವಾರ್ಷಿಕೋತ್ಸವ ಮತ್ತು ಜ ಅ ವಿದ್ಯಾ ಸಮಿತಿಯ ಶತಮಾನೋತ್ಸವ ಸಮಾರಂಭದ ಸಾನಿದ್ಯ ವಹಿಸಿ ಮಾತಾನಾಡುತ್ತಾ ಪರೋಪಕಾರಂ ಇದಂ ಶರೀರಂ ಬದುಕಿನ ಸಾರ್ಥಕತೆ ಅಡಗಿರುವುದೇ ಇತರರ ಸೇವೆಯಲ್ಲಿ, ಕನಿಷ್ಠ ನಮಗಾಗಿ ಮತ್ತು ನಮ್ಮವರಿಗಾಗಿ ಜೊತೆಯಲ್ಲಿ ಇತರರಿಗಾಗಿ ಎಂಬುದು ಹೆಚ್ಚು ಅರ್ಥಪೂರ್ಣ ಎನಿಸುತ್ತದೆ ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡ ವ್ಯಕ್ತಿಯಾಗುತ್ತಾನೆ ಎಂದು -ಮಹಾತ್ಮ ಗಾಂಧಿಜೀ ಹೇಳಿದ್ದಾರೆ, ಗೌತಮ ಬುದ್ಧ, ಮಹಾವೀರ, ಬಸವಣ್ಣ, ವಿವೇಕಾನಂದ, ಬಾಬಾ ಸಾಹೇಬ್ ಅಂಬೇಡ್ಕರ್ ಮುಂತಾದ ಅನೇಕ ಮಹಾತ್ಮರು ತಮ್ಮ ಮನೆಯವರಿಗಾಗಿ ಹೆಚ್ಚಾಗಿ ಏನನ್ನೂ ಮಾಡಲಿಲ್ಲ.
ಆದರೆ ನಾವುಗಳು ಮತ್ತು ಇಡೀ ದೇಶ ಈಗಲೂ ಅವರನ್ನು ನೆನಪಿಸಿಕೊಳ್ಳುತ್ತದೆ ಮತ್ತು ಅವರ ಹುಟ್ಟು ಹಬ್ಬವನ್ನು ಅತ್ಯಂತ ಅಭಿಮಾನದಿಂದ ಆಚರಿಸಲಾಗುತ್ತದೆ ಆದ್ದರಿಂದ ಈ ಬದುಕು ಸಮಾಜ ಮುಖಿಯಾಗಿರಬೇಕು ಹಾಗೂ ಕುಕನೂರಿನ ಶ್ರೀಗಳ ಕಾರ್ಯಶೀಲತೆ ಶ್ಲಾಘನೀಯ ಅವರಲ್ಲಿರುವ ಗುರುಭಕ್ತಿ ದೊಡ್ಡದು ಎಂದರು. ನಂತರ ಪೂಜ್ಯ ಮಹಾದೇವ ಸ್ವಾಮೀಜಿ ಮಾತನಾಡಿ ಗುರುವಿನ ಮಹಿಮೆ ಅಪಾರ ಏಕೆಂದರೆ ಅವರು ಜ್ಞಾನವನ್ನು ಹಂಚುವ, ಅಜ್ಞಾನವನ್ನು ನಿವಾರಿಸುವ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನ ನೀಡುವ ಶಕ್ತಿಯಾಗಿದ್ದಾರೆ. ಗುರುವು ಶಿಷ್ಯನ ಭವಿಷ್ಯವನ್ನು ರೂಪಿಸುವ ಸೃಷ್ಟಿಕರ್ತ, ತತ್ವಗಳನ್ನು ನೀಡುವ ಮಾರ್ಗದರ್ಶಕ ಮತ್ತು ತಪ್ಪುಗಳಿಂದ ಸರಿಪಡಿಸುವ ಶ್ರೇಷ್ಠ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ಗುರುವಿನ ಮಹಿಮೆಯನ್ನು "ಹರ ಮುನಿದರೆ ಗುರು ಕಾಯುವನು, ಗುರು ಮುನಿದರೆ ಯಾರು ಕಾಯುವರು?" ಎಂಬ ಮಾತಿನಿಂದ ತಿಳಿಯಬಹುದು ಇಂತಹ ಶ್ರೇಷ್ಠ ಗುರುಗಳಾದ ಮಂಡರಗಿ ಜಗದ್ಗುರುಗಳನ್ನ ಪಡೆದ ನಾವೇ ದನ್ಯರು ಎಂದರು.
ಈ ಸಂದರ್ಭದಲ್ಲಿ ಬೆಟಗೇರಿ ಗ್ರಾಮದ ಸಮಸ್ತ ಸದ್ಬಕ್ತರು ಮುಂಡರಗಿಯ ವಿದ್ಯಾಸಮಿಯ ಶತಮಾನೋತ್ಸವಕ್ಕೆ ಐವತ್ತೊಂದು ಸಾವಿರ ರೂಪಾಯಿ ದೇಣಿಗೆ ನೀಡಿ ಪೂಜ್ಯರಿಗೆ ಗುರುವಂದನೆ ಸಲ್ಲಿಸಿದರು. ಬಸವರಾಜ ಬಳ್ಳೊಳ್ಳಿ, ರಮೇಶ ಹಟ್ಟಿ, ವಿರೇಶ ಸಜ್ಜನ, ಗುರುಬಸಯ್ಯ ಬೃಹನ್ಮಠ, ಸೋಮಪ್ಪ ಮತ್ತೂರು, ಪ್ರಭು ಶಿವಸಿಂಪರ, ರಾಜೇಂದ್ರ್ಪ ಕಡಹಳ್ಳಿ, ಮುತ್ತಯ್ಯ ಹಿರೇಮಠ, ಸೋಮಣ್ಣ ಅರಕೇರಿ, ಬಸವರಾಜ ನಾಗರೆಡ್ಡಿ, ಯಮನೂರ್ಪ, ವಿಜಯ, ನಾರಾಯಣಪ್ಪ, ಬಾಬುಸಾಬ ಮತ್ತು ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 