ವಾಸವಿ ವಿದ್ಯಾಲಯದಲ್ಲಿ ಅರ್ಥಪೂರ್ಣ ರಕ್ಷಾ ಬಂಧನ ಆಚರಣೆ
Meaningful Raksha Bandhan celebration at Vasavi Vidyalaya
ವಾಸವಿ ವಿದ್ಯಾಲಯದಲ್ಲಿ ಅರ್ಥಪೂರ್ಣ ರಕ್ಷಾ ಬಂಧನ ಆಚರಣೆ
ಬಳ್ಳಾರಿ 09 : ನಗರದಲ್ಲಿರಕ್ಷಾ ಬಂಧನ ಹಬ್ಬವು ಸಹೋದರ -ಸಹೋದರಿಯರಆತ್ಮೀಯ ಬಾಂಧವ್ಯವನ್ನು ಹಿರಿಮೆಗೆರಿಸುವ ಪ್ರಮುಖ ಹಬ್ಬವಾಗಿದೆ. ರಕ್ಷಾ ಬಂಧನವು ನಮ್ಮ ಸಂಸ್ಕೃತಿಯಲ್ಲಿ ಕುಟುಂಬದ ಸಂಬಂಧಗಳ ಮಹತ್ವವನ್ನು ನೆನಪಿಸುತ್ತದೆ. ಶ್ರೀ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಶಾಲೆಯಲ್ಲಿ ಸಂತೋಷದಿಂದ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು. ಈ ಸಂಧರ್ಭದಲ್ಲಿ ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳ ಕೈಗೆ ರಾಖಿಕಟ್ಟಿ, ಸಹೋದರತ್ವ, ಸ್ನೇಹ, ಪ್ರೀತಿ ಮತ್ತು ಬಾಂಧವ್ಯದ ಮಹತ್ವವನ್ನು ಸಾರಿದರು.ಪ್ರತಿ ವರ್ಷದಂತೆ ಈ ವರ್ಷವು ಶ್ರೀ ವಾಸವಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳು ಬಳ್ಳಾರಿಯ ಕಂಟೋನ್ಮಂಟ್ರಸ್ತೆಯಲ್ಲಿರುವ ಶಾಂತಿಧಾಮದಲ್ಲಿರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.ನಿಷ್ಕಲ್ಮಷ ಮನಸ್ಸಿನ ವಿಶೇಷ ಮಕ್ಕಳ ಕೈಗೆ ರಾಖಿಕಟ್ಟಿ,ಅವರ ಪ್ರತಿಭೆಯನ್ನು ಮೆಚ್ಚಿ ಗೌರವಿಸಿದರು. ಈ ಮೂಲಕ ವಿದ್ಯಾರ್ಥಿಗಳು ಮಾನವೀಯತೆ,ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಹಂಚಿಕೊಂಡರು.ಶ್ರೀ ವಾಸವಿ ಕಿಂಡರ್ಗಾರ್ಟನ್ ಮಕ್ಕಳು ತಮ್ಮ ಮುಗ್ಧ ನಗು ಹಾಗೂ ಮಮತೆಯಿಂದರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಪುಟ್ಟ ಬಾಲಕಿಯರು ಬಾಲಕರ ಕೈಗೆ ರಾಖಿಕಟ್ಟೆ, ಸಹೋದರ-ಸಹೋದರಿಯರ ಪ್ರೀತಿ ಮತ್ತು ಬಾಂಧವ್ಯದ ಸಂದೇಶವನ್ನು ಹಂಚಿಕೊಂಡರು.ಈ ಸಂಧರ್ಭದಲ್ಲಿ ಶಿಕ್ಷಕರು ಮಕ್ಕಳನ್ನು ಪ್ರೋತ್ಸಾಹಿಸಿದರು.ಶಾಲೆಯಲ್ಲಿ ಈ ರೀತಿಯ ಹಬ್ಬವನ್ನು ವಿದ್ಯಾರ್ಥಿಗಳೊಂದಿಗೆ ಆಚರಿಸುವುದು,ಅವರಿಗೆ ಹಬ್ಬಗಳ ಮಹತ್ವ ಹಾಗೂ ಮೌಲ್ಯಗಳನ್ನು ತಿಳಿಯಲು ಸಹಾಯಕವಾಗಿದೆ. ಶ್ರೀ ವಾಸವಿ ವಿದ್ಯಾಲಯದಲ್ಲಿ ನಡೆದರಕ್ಷಾ ಬಂಧನ ಹಬ್ಬದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪರಸ್ಪರ ಪ್ರೀತಿ,ಸಹಕಾರ ಮತ್ತು ಸಂಸ್ಕೃತಿಯಅರಿವನ್ನು ಹೆಚ್ಚಿಸುತ್ತದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 