ಹಿರಿಯ ಪತ್ರಕರ್ತ ಎಚ್ ಎಸ್ ಹರೀಶ್ ಗೆ ಮಾಧ್ಯಮ ಅಕಾಡೆಮಿ ರಾಜ್ಯ ಪ್ರಶಸ್ತಿ ಪ್ರಧಾನ
ಕೊಪ್ಪಳ 03: ಜಿಲ್ಲೆಯ ಹಿರಿಯ ಪತ್ರಕರ್ತ ಸ್ಥಳೀಯ ಸುದಿನ ಕನ್ನಡ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಎಚ್ಎಸ್ ಹರೀಶ್ ರವರಿಗೆ ಅವರ ಮಾಧ್ಯಮ ಕ್ಷೇತ್ರದ ಮೂರು ದಶಕದ ಉತ್ತಮ ಸೇವೆಗಾಗಿ ಸೋಮವಾರ ಬೆಂಗಳೂರಿನ ಜೆಎನ್ ಟಾಟಾ ಸಭಾಂಗಣದಲ್ಲಿ ಏರಿ್ಡಸಿದ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ 2024ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಯನ್ನು ಮತ್ತು ಐವತ್ತು ಸಾವಿರ ನಗದು ಬಹುಮಾನವನ್ನು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನ ಮಾಡಿ ಸತ್ಕರಿಸಿ ಅಭಿನಂದಿಸಿದರು.
ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೇ ಆಯೀಷಾ ಖಾನಂ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಕಾವೇರಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರು ಹಾಗೂ ಮಾಧ್ಯಮ ಅಕಾಡೆಮಿ ರಾಜ್ಯ ಸದಸ್ಯರಾದ ಶಿವಾನಂದ ತಗಡೂರು ಅನೇಕರು ಪಾಲ್ಗೊಂಡಿದ್ದರು.
ಇದೆ ವೇಳೆ ಕೊಪ್ಪಳ ಜಿಲ್ಲೆಯ ಪತ್ರಕರ್ತ ಶಿರಾಜ್, ಬಿಸರಹಳ್ಳಿ, ಗಂಗಾವತಿಯ ಮಲ್ಲಿಕಾರ್ಜುನ್ ರವರಿಗೆ 2023 ನೇ ಸಾಲಿನ ಮಾಧ್ಯಮ ಅಕಾಡೆಮಿ ರಾಜ್ಯ ಪ್ರಶಸ್ತಿ ಮತ್ತು ಉತ್ತಮ ವರದಿಗಾಗಿ ಯುವ ಪತ್ರಕರ್ತ ಅಖಿಲ್ ಉಡೆವು ಅವರಿಗೂ ಸಹ ಪ್ರಶಸ್ತಿ ಪ್ರದಾನ ಮಾಡಿ ಸತ್ಕರಿಸಲಾಯಿತು.