ಜಲಶಕ್ತಿ ಯೋಜನೆ ಜಿಲ್ಲಾ ನೋಡಲ್ ಅಧಿಕಾರಿ ಭೇಟಿ
ಗದಗ 08: ಮಳೆ ನೀರಿನ ಸಂಗ್ರಹಣೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸಕರ್ಾರ ಜಲಶಕ್ತಿ ಅಭಿಯಾನ ಆರಂಭಿಸಿದ್ದು ಜಿಲ್ಲೆಯ ಗದಗ ಹಾಗೂ ರೋಣ ತಾಲೂಕುಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿಯಾಗಿರುವ ಕೇಂದ್ರ ವಾಣಿಜ್ಯ ಇಲಾಖೆ ಹೆಚ್ಚುವರಿ ಕಾರ್ಯದಶರ್ಿ ಸುನೀಲ ಕುಮಾರ ಅವರು ಶನಿವಾರ ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ಸಭೆ ಜರುಗಿಸಿ ಸಲಹೆ ಸೂಚನೆ ನೀಡಿದರು.
ರವಿವಾರ ಅವರು ರೋಣ ತಾಲೂಕಿನ ನರೇಗಲ್ ಮುದೇನಗುಡಿ, ಕುರಹಟ್ಟಿ, ಕೊತಬಾಳ, ಅಬ್ಬಿಗೇರಿಗಳಿಗೆ ಭೇಟಿ ನೀಡಿ ಜಲಸಂವರ್ಧನೆ, ಜಲ ಸಂರಕ್ಷಣೆ , ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದರು. ಒಟ್ಟಾರೆ ಮಳೆಯ ನೀರನ್ನು ಹಿಡಿದಿಟ್ಟು ಅದನ್ನು ಬಳಸಲು ಅನುಕೂಲವಾಗುವಂತೆ ವಿವಿಧ ಇಲಾಖೆಗಳ ಮೂಲಕ ಜಾರಿಗೊಳಿಸಲಾದ ಕಾಮಗಾರಿಗಳನ್ನು ವೀಕ್ಷಿಸಿ ಅವುಗಳ ಸಾಮರ್ಥ್ಯ ಹೆಚ್ಚಿಸಲು ಸುನೀಲ ಕುಮಾರ ಸಲಹೆ ಮಾಡಿದರು.
ಕೃಷಿ ಜಂಟಿ ನಿರ್ದೇಶಕ ಬಾಲರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಾಗಶೆಟ್ಟಿ, ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಎಂ.ವಿ. ಚಳಗೇರಿ, ಸಹಾಯಕ ಕೃಷಿ ನಿರ್ದೇಶಕ ಸಿದ್ಧೇಶ ಕೋಡಿಹಳ್ಳಿ , ನರೇಗಲ್ ಪ.ಪಂ. ಮುಖ್ಯಾಧಿಕಾರಿ ಎಸ್.ಎಸ್. ಹುಲ್ಲಮ್ಮನವರ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 