ಕಳಪೆ ಮೆಕ್ಕೆಜೋಳ ಬಿತ್ತನೆ ಬೀಜದಿಂದ ಮೋಸಹೋದ ರೈತರ ಮತ್ತು ಅಧಿಕಾರಿಗಳ ಸಭೆ
Meeting of farmers and officials who were cheated by poor quality maize seeds
ರಾಣೇಬೆನ್ನೂರು 31: ಕಂಪನಿಯ ಕಳಪೆ ಮೆಕ್ಕೆಜೋಳದ ಬಿತ್ತನೆ ಬೀಜದಿಂದ ಮೋಸಹೋದ ರೈತರ ಮತ್ತು ಅಧಿಕಾರಿಗಳ ಸಭೆಯನ್ನು ನವೆಂಬರ್ 03-25 ರಂದು ಸೋಮವಾರ ಮುಂಜಾನೆ 11 ಘಂಟೆಗೆ ರಾಣೇಬೆನ್ನೂರಿನ ಹಲಗೇರಿ ರಸ್ತೆಯ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಕಳಪೆಬೀಜ ಪೂರೈಸಿದ ಕಂಪನಿಯ ಮಾಲೀಕರ ಮೇಲೆ ಸರಕಾರ ಯಾವ ಕ್ರಮ ಕೈಗೊಂಡಿದೆ, ತನಿಖಾ ಹಂತ ಏನಾಯಿತು, ನ್ಯಾಯಾಲಯದಲ್ಲಿ ಪ್ರಕರಣ ಏನಾಗಿದೆ ಮತ್ತು ಕಂಪನಿಯ ಮಾಲೀಕನ ಆಸ್ತಿ ಮತ್ತು ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಯಾವ ತೀರ್ಮಾನ ತೆಗೆದುಕೊಳ್ಳಲಾಗಿದೆ ಮತ್ತು ಮೋಸಹೋದ ರೈತರಿಗೆ ಸರಕಾರದಿಂದ ಪರಿಹಾರ ಕೊಡುವ ಬಗ್ಗೆ ಏನೇನು ಕ್ರಮ ಜರುಗಿಸಲಾಗಿದೆ ಹಾಗೂ ಮುಂದಿನ ಹೋರಾಟದ ರೂಪರೇಶಗಳ ಬಗ್ಗೆ ಚರ್ಚಿಸಲಾಗುವುದು. ಈ ಸಭೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಿದ್ದು ಸಂಪೂರ್ಣ ಮಾಹಿತಿ ನೀಡಬೇಕು ಎಂದು ಹೋರಾಟ ಸಮೀತಿಯ ಅಧ್ಯಕ್ಷ ರವೀಂದ್ರಗೌಡ ಪಾಟೀಲ ಹಾಗೂ ಈರಣ್ಣ ಹಲಗೇರಿ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 