ಕಳಪೆ ಮೆಕ್ಕೆಜೋಳ ಬಿತ್ತನೆ ಬೀಜದಿಂದ ಮೋಸಹೋದ ರೈತರ ಮತ್ತು ಅಧಿಕಾರಿಗಳ ಸಭೆ
Meeting of farmers and officials who were cheated by poor quality maize seeds
ರಾಣೇಬೆನ್ನೂರು 31: ಕಂಪನಿಯ ಕಳಪೆ ಮೆಕ್ಕೆಜೋಳದ ಬಿತ್ತನೆ ಬೀಜದಿಂದ ಮೋಸಹೋದ ರೈತರ ಮತ್ತು ಅಧಿಕಾರಿಗಳ ಸಭೆಯನ್ನು ನವೆಂಬರ್ 03-25 ರಂದು ಸೋಮವಾರ ಮುಂಜಾನೆ 11 ಘಂಟೆಗೆ ರಾಣೇಬೆನ್ನೂರಿನ ಹಲಗೇರಿ ರಸ್ತೆಯ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಕಳಪೆಬೀಜ ಪೂರೈಸಿದ ಕಂಪನಿಯ ಮಾಲೀಕರ ಮೇಲೆ ಸರಕಾರ ಯಾವ ಕ್ರಮ ಕೈಗೊಂಡಿದೆ, ತನಿಖಾ ಹಂತ ಏನಾಯಿತು, ನ್ಯಾಯಾಲಯದಲ್ಲಿ ಪ್ರಕರಣ ಏನಾಗಿದೆ ಮತ್ತು ಕಂಪನಿಯ ಮಾಲೀಕನ ಆಸ್ತಿ ಮತ್ತು ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಯಾವ ತೀರ್ಮಾನ ತೆಗೆದುಕೊಳ್ಳಲಾಗಿದೆ ಮತ್ತು ಮೋಸಹೋದ ರೈತರಿಗೆ ಸರಕಾರದಿಂದ ಪರಿಹಾರ ಕೊಡುವ ಬಗ್ಗೆ ಏನೇನು ಕ್ರಮ ಜರುಗಿಸಲಾಗಿದೆ ಹಾಗೂ ಮುಂದಿನ ಹೋರಾಟದ ರೂಪರೇಶಗಳ ಬಗ್ಗೆ ಚರ್ಚಿಸಲಾಗುವುದು. ಈ ಸಭೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಿದ್ದು ಸಂಪೂರ್ಣ ಮಾಹಿತಿ ನೀಡಬೇಕು ಎಂದು ಹೋರಾಟ ಸಮೀತಿಯ ಅಧ್ಯಕ್ಷ ರವೀಂದ್ರಗೌಡ ಪಾಟೀಲ ಹಾಗೂ ಈರಣ್ಣ ಹಲಗೇರಿ ಅವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 