ಬ್ಯಾಡಗಿಯಲ್ಲಿ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಸಭೆ
Meeting of the Okkalutana Nativity Cooperative Society in Byadgi
ಬ್ಯಾಡಗಿಯಲ್ಲಿ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಸಭೆ
ಬ್ಯಾಡಗಿ 16: ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ 2025 ರ 105 ನೇ ವಾರ್ಷಿಕ ಮಹಾ ಸಭೆಯು ಅಧ್ಯಕ್ಷ ಪರಮೇಶಗೌಡ ತೆವರಿ ಅಧ್ಯಕ್ಷತೆಯಲ್ಲಿ ನಡೆಯಿತು. ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷ ನಾಗನಗೌಡ ಪಾಟೀಲ ಮಾತನಾಡಿ ರೈತರ ಷೇರು ಹಣದಿಂದಲೇ ಅಭಿವೃದ್ಧಿ ಹೊಂದುತ್ತಿರುವ ಸಂಘ ರೈತ ಪರವಾಗಿದ್ದುಕೊಂಡು ರೈತರ ಸಲಹೆ ಸೂಚನೆಗಳನ್ನು ಅನುಸರಿಸಿ ನೆಡೆಯುವುದು. ರೈತ ಪರವಾಗಿದ್ದುಕೊಂಡು ಕಾರ್ಯನಿರ್ವಹಿಸಲು ಆಡಳಿತ ಮಂಡಳಿ ಬದ್ಧವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದು ಸಂಘವನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದರು. ತಾಲ್ಲೂಕಾ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಸರ್ವಸದಸ್ಯರು ಹಲವು ಸಲಹೆ, ಸೂಚನೆಗಳನ್ನು ನೀಡಿದರು. ಸಂಘದ ವ್ಯವಸ್ಥಾಪಕ ಪ್ರಭು ಬಣಕಾರ ಸ್ವಾಗತದೊಂದಿಗೆ ವಾರ್ಷಿಕ ವರದಿಯನ್ನು ಸಭೆಯಲ್ಲಿ ಓದಿದರು ಸದಸ್ಯರ ಸಲಹೆ ಸೂಚನೆಗಳನ್ನು ಪಾಲಿಸುವುದಾಗಿ ಸಭೆಗೆ ತಿಳಿಸಿದರು.ಸಭೆಯಲ್ಲಿ ಸಂಘದ ನಿರ್ದೇಶಕರಾದ ಕುಮಾರ ಚೂರಿ, ಚನ್ನಬಸನಗೌಡ ಹೊಟ್ಟಿಗೌಡ, ಜಗದೀಶ ಕಿರವಾಡಿ, ಚನ್ನಬಸಪ್ಪ ಹುಲ್ಲತ್ತಿ, ಪ್ರಮೀಳಾ ಬಿದರಕಟ್ಟಿ, ಪ್ರೇಮಾ ತೋಟದ, ಸೋಮೇಶ್ವರ ಚವಟಿ, ಚಂದ್ರ್ಪ ಬಾರ್ಕಿ, ಮಂಜನಗೌಡ ಲಿಂಗನಗೌಡ, ಗಂಗಣ್ಣ ಎಲಿ, ಜಿ.ಎಸ್ ಬಸನಗೌಡ, ವಿ.ಕೆ ಪೂಜಾರ ಸೇರಿದಂತೆ ಸಿಬ್ಬಂದಿಗಳು ಹಾಗೂ ಇನ್ನಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 