ನಾಳೆ ಗುತ್ತಿಗೆದಾರರ ಸಂಘದ ಸರ್ವ ಸದಸ್ಯರ ಸಭೆ
ಲೋಕದರ್ಶನ ವರದಿ
ಬ್ಯಾಡಗಿ27: ಜಿಲ್ಲಾ ಪ್ರವಾಸಿ ಮಂದಿರದಲ್ಲಿ ನ.29 ರಂದು ಮುಂಜಾನೆ 10-30 ಘಂಟೆಗೆ ಜಿಲ್ಲಾ ಎಸ್ಸಿ/ಎಸ್ಟಿ ಸಿವಿಲ್ ಗುತ್ತಿಗೆದಾರರ ಸಂಘದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದಶರ್ಿ ರಾಘವೇಂದ್ರ ದೇವಿಹೊಸೂರ ತಿಳಿಸಿದ್ದಾರೆ.
ಅಂದಿನ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಂಘದ ಅಧ್ಯಕ್ಷ ಅಜರ್ುನ ಹಂಚಿನಮನಿ ವಹಿಸಲಿದ್ದಾರೆ. ಸಭೆಯಲ್ಲಿ ನೂತನ ಸಂಘದ ರಚನೆಯಾಗಿ ನೋಂದಣಿಯಾದ ಬಗ್ಗೆ ಚಚರ್ೆ, ಎಸ್ಸಿ/ಎಸ್ಟಿ ಗುತ್ತಿಗೆದಾರರ ಕುಂದುಕೊರತೆಗಳ ಬಗ್ಗೆ, ನೂತನ ಸಂಘದ ಕಾಯರ್ಾಲಯದ ಬಗ್ಗೆ ಚಚರ್ೆ, ವಿವಿಧ ತಾಲೂಕುಗಳಲ್ಲಿ ಕೆಲ ಇಂಜನೀಯರರುಗಳು ನಮ್ಮ ಗುತ್ತಿಗೆದಾರರೊಂದಿಗೆ ಸರಿಯಾಗಿ ಸ್ಫಂದನೆ ಮಾಡದೇ ಇರುವುದರ ಬಗ್ಗೆ ಚಚರ್ೆ ಹಾಗೂ ನೂತನ ರಟ್ಟಿಹಳ್ಳಿ ತಾಲೂಕಿನ ಘಟಕದ ರಚನೆ ಮಾಡುವುದರ ಬಗ್ಗೆ ಚಚರ್ಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಭೆಯಲ್ಲಿ ಚಚರ್ಿಸಲಿದ್ದು, ಅಂದಿನ ಸಭೆಗೆ ಜಿಲ್ಲಾ ಸಂಘದ ಹಾಗೂ ಎಲ್ಲಾ ತಾಲೂಕಿನ ಎಸ್ಸಿ/ಎಸ್ಟಿ ಸಿವಿಲ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಗುತ್ತಿಗೆದಾರರು ಆಗಮಿಸಿ ಸಲಹೆ ಸೂಚನೆ ನೀಡುವಂತೆ ಕೋರಿದ್ದಾರೆ.
ಸಭೆಯಲ್ಲಿ ಜಿಲ್ಲಾ ಸಂಘದ ಕಾರ್ಯದಶರ್ಿ ಜಗದೀಶ ಮನ್ನಂಗಿ, ಹಾವೇರಿ ತಾಲೂಕಾ ಅಧ್ಯಕ್ಷ ವೀರೂಪಾಕ್ಷಪ್ಪ ನರಗುಂದ, ಸವಣೂರ ತಾಲೂಕಾ ಅಧ್ಯಕ್ಷ ಎಸ್.ಎಸ್.ಹುಲ್ಲಮ್ಮನವರ, ಹಾನಗಲ್ ತಾಲೂಕಾ ಅಧ್ಯಕ್ಷ ಮಹದೇವಪ್ಪ ಬಂಡಿವಡ್ಡರ, ರಾಣೆಬೆನ್ನೂರ ತಾಲೂಕಾ ಅಧ್ಯಕ್ಷ ಮಾನಪ್ಪ ಲಮಾಣಿ, ಹಿರೇಕೆರೂರ ತಾಲೂಕಾ ಅಧ್ಯಕ್ಷ ಮಲ್ಲೇಶಪ್ಪ ನಾಯಕ, ಬ್ಯಾಡಗಿ ತಾಲೂಕಾ ಅಧ್ಯಕ್ಷ ಬಸವಂತಪ್ಪ ಹುಲ್ಲತ್ತಿ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರೆಂದು ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 