ಚರ್ಮಕಾರ ಸಮಾಜದ ಬೆಳಗಾವಿಯ ಪ್ರಮುಖ ಮುಖಂಡರೊಂದಿಗೆ ಸಭೆ
Meeting with prominent leaders of the leather workers' society in Belgaum
ಚರ್ಮಕಾರ ಸಮಾಜದ ಬೆಳಗಾವಿಯ ಪ್ರಮುಖ ಮುಖಂಡರೊಂದಿಗೆ ಸಭೆ
ಬೆಳಗಾವಿ 28: ರಾಜ್ಯದ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ನಿರ್ದೇಶನದಂತೆ ಡಾ. ಬಾಬು ಜಗಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಲೀಡಕರ್ ಅಧ್ಯಕ್ಷರಾದ ಮುಂಡರಗಿ ನಾಗರಾಜರವರು ಬೆಳಗಾವಿಯ ಸರ್ಕ್ಯೂಟ್ ಹೌಸಿನಲ್ಲಿ ಚರ್ಮಕಾರ/ಚಮ್ಮಾರ ಸಮಾಜದ ಬೆಳಗಾವಿಯ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿದರು. ಈ ಭೇಟಿಯಲ್ಲಿ, ಸಂಕೇಶ್ವರ, ನಿಪ್ಪಾಣಿ ಲೆದರ್ ಕ್ಲಸ್ಟರ್ ಹಾಗೂ ಬೆಳಗಾವಿ ಪ್ರದೇಶಗಳಲ್ಲಿ ಚರ್ಮಕಾರ ಸಮಾಜದವರಿಗಾಗಿ ವಸತಿ ಯೋಜನೆಗಳ ಅನುಷ್ಠಾನ ಕುರಿತಂತೆ, ಮತ್ತು ಧಾರವಾಡದ ಸೂಪರ್ ಮಾರ್ಕೆಟ್ ನಲ್ಲಿ ಅಂಗಡಿಗಳನ್ನು ಮಂಜೂರು ಮಾಡುವ ಬಗ್ಗೆ ಚರ್ಚೆ ನಡೆಯಿತು. ಸಮಾಜದ ಮೂಲಭೂತ ಅವಶ್ಯಕತೆಗಳು ಹಾಗೂ ವೃತ್ತಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಮನವಿಯು ನೀಡಲಾಯಿತು. ಸಭೆಯಲ್ಲಿ ಚರ್ಮಕಾರ ಮಹಾಸಭಾದ ರಾಜ್ಯಾಧ್ಯಕ್ಷರಾದ ಭೀಮರಾವ ಪವಾರ, ರಾಜ್ಯ ಕಾರ್ಯದರ್ಶಿ ಸಂಜೀವ ಲೋಕಾಪುರ, ಚರ್ಮ ಕುಶಲಕರ್ಮಿಗಳ ಕುಂದು ಕೊರತೆ ನಿವಾರಣಾ ಸಮಿತಿಯ ಸದಸ್ಯರಾದ ಸಂತೋಷ ಹೊಂಗಲ, ಹರಳಯ್ಯ ಸಮಾಜದ ಜಿಲ್ಲಾಧ್ಯಕ್ಷರಾದ ಗಣೇಶ ಕಾಳೆ, ಹೀರಾಲಾಲ ಚವಾಣ, ಲಿಡ್ಕರ್ ಜಿಲ್ಲಾ ಸಂಯೋಜಕರಾದ ಎ. ಎಸ್. ರುದ್ರೇಶಿ, ಸಂಜಯ ಚೌಗುಲೆ, ಶಿವಾಜಿ ಕಾಂಬಳೆ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು. ಸಭೆಯ ಕೊನೆಯಲ್ಲಿ, ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಮುಂಡರಗಿ ನಾಗರಾಜ ರವರಿಗೆ ಗೌರವ ಸತ್ಕಾರ ನಡೆಯಿತು. ಸಮಾಜದ ಹಿತದೃಷ್ಟಿಯಿಂದ ನಿರಂತರ ಪೂರಕ ಕಾರ್ಯಾಚರಣೆಗೆ ಭರವಸೆ ನೀಡಿದರು.
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ 