ವಿವಿಧ ಬಗೆಯ ವಿನ್ಯಾಸದ ಮೆಹೆಂದಿ ಪ್ರದರ್ಶನ
Mehendi exhibition of various designs
ಕಂಪ್ಲಿ 11: ನಾಡಿನ ಕಲೆ, ಸಂಸ್ಕೃತಿಯಲ್ಲಿ ಒಂದಾದ ಮೆಹೆಂದಿಯೂ ಶುಭದ ಸಂಕೇತವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ್ ಅವರ ಧರ್ಮಪತ್ನಿ ಶ್ರೀದೇವಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಬಿಎಸ್ವಿ ಶಾಲೆಯಲ್ಲಿ ಕಂಪ್ಲಿ ಉತ್ಸವದ ಹಿನ್ನಲೆ ಬುಧವಾರ ಹಮ್ಮಿಕೊಂಡಿದ್ದ ಮೆಹೆಂದಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಸೃಜನಸೀಲತೆ ಮತ್ತು ಸಾಂಪ್ರದಾಯ ಕೌಶಲ್ಯಗಳನ್ನು ಪ್ರದರ್ಶಿಸುವ ರೋಮಾಂಚನ ಕಾರ್ಯಕ್ರಮವಾಗಿದೆ. ಮಹಿಳೆಯರ ಕಲೆಗೆ ಇದೊಂದು ಮುಖ್ಯ ವೇದಿಕೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸಿಡಿಪಿಒ ಪ್ರದೀಪ್, ಪುರಸಭೆಯ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಸಮುದಾಯ ಸಂಘಟನಾಧಿಕಾರಿ(ಕಂದಾಯ ನೀರೀಕ್ಷಕಿ) ಜಯಲಕ್ಷ್ಮೀ, ಅಂಗನವಾಡಿ ಮೇಲ್ವಿಚಾರಕಿ ಲತೀಫಾ ಬೇಗಂ,
ಇಲ್ಲಿನ ಮೆಹೆಂದಿ ಸ್ಪರ್ಧೆಯಲ್ಲಿ ನಾಡಿನ ವಿವಿಧ ಬಗೆಯ ವಿನ್ಯಾಸದ ಮೆಹೆಂದಿಯಲ್ಲಿ ಕಂಗೊಳಿಸುತ್ತಿರುವುದು ಕಂಡು ಬಂತು. ಇಲ್ಲಿನ ಮೆಹೆಂದಿ ಚಿತ್ತಾರಗಳು ನೋಡುಗರ ಆಕರ್ಷಣೆಗೆ ಪಾತ್ರವಾದವು.
ಇಲ್ಲಿನ ಸ್ಪರ್ಧೆಯಲ್ಲಿ ಬಿ.ಕೆ.ಸಲ್ಮಾನಾಜ್ ಪ್ರಥಮ ಸ್ಥಾನದೊಂದಿಗೆ ಬಹುಮಾನದೊಂದಿಗೆ ಪ್ರಶಸ್ತಿ ಪ್ರಮಾಣ ಪತ್ರ ಪಡೆದುಕೊಂಡರು. ಆಫ್ರೀನ್ ಇವರು ದ್ವೀತಿಯ ಸ್ಥಾನ ಹೊಂದಿದರು. ಕೌಸರ್(ಗೌಸಿಯಾ) ಇವರು ತೃತೀಯ ಸ್ಥಾನದೊಂದಿಗೆ ಪ್ರಶಸ್ತಿ ಪತ್ರ ಪಡೆದುಕೊಂಡರು. ಉಳಿದ ಸ್ಪರ್ಧಿಗಳಿಗೆ ಸಮಧಾನಕರ ಬಹುಮಾನ ನೀಡಲಾಯಿತು. ವಿದ್ಯಾರ್ಥಿನಿಯರು, ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 