ಮೈಕ್ರೋ ಫೈನಾನ್ಸ್ ಜಾಗೃತಿ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ
Microfinance Awareness, Socio-Economic Development Workshop
ರಾಯಬಾಗ, 28 : ಆರ್ಥಿಕ ವಿಷಯಗಳ ಬಗ್ಗೆ ಜನರಿಗೆ ಉತ್ತಮ ಮಾಹಿತಿ ಮತ್ತು ತಿಳುವಳಿಕೆ ನೀಡುವುದು ಹಣಕಾಸು ಸಂಸ್ಥೆಗಳ ಕರ್ತವ್ಯವಾಗಿದೆ ಎಂದು ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ ಹೇಳಿದರು.
ಗುರುವಾರ ಪಟ್ಟಣದ ದತ್ತ ಮಂದಿರದಲ್ಲಿ ಮೈಕ್ರೋ ಫೈನಾನ್ಸ್ ಜಾಗೃತಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಸಾಲಗಾರರು ಸಾಲಗಳನ್ನು ಪಡೆಯುವಾಗ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಅವರು ಹಣಕಾಸು, ಜೀವನೋಪಾಯ, ಕುಟುಂಬ ಮತ್ತು ಸಾಮಾಜಿಕ ಭದ್ರತಾ ಅಂಶಗಳ ಕುರಿತು ಉತ್ತಮ ಮಾರ್ಗಗಳನ್ನು ಅನ್ವೇಷಿಸುತ್ತಾರೆ ಎಂದು ಹೇಳಿದರು.
ಮೈಕ್ರೋಫೈನಾನ್ಸ್ ಇಂಡಸ್ಟ್ರಿ ನೆಟ್ ವರ್ಕ ಉಪಾಧ್ಯಕ್ಷ ಮಂಜುನಾಥ ಎಮ್.ಎಸ್. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಆರ್ಥಿಕ ಸಾಕ್ಷರತೆ ಅತ್ಯಂತ ಮಹತ್ವದ್ದಾಗಿದೆ. ಮೈಕ್ರೋಫೈನಾನ್ಸ್ ಕಂಪನಿಗಳು ಭಾರತೀಯ ರಿಸರ್ವ ಬ್ಯಾಂಕ್ನಿಂದ ನಿಯಂತ್ರಿಸಲ್ಪಡುತ್ತವೆ ಎಂದು ತಿಳಿಸಿದರು.
ಹಣಕಾಸು ಸಾಕ್ಷರತಾ ಸಂಯೋಜಕ ಗುರುರಾಜ ಹಿರೇಮಠ, ಕ್ರೆಡಿಟ್ಆಕ್ಸೆಸ್ ಗ್ರಾಮೀಣ ಲಿ. ವಿಭಾಗೀಯ ವ್ಯವಸ್ಥಾಪಕ ಮಾದೇಗೌಡ ಸಿ., ವಿವಿಧ ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 