ಮೈಕ್ರೋ ಫೈನಾನ್ಸ್ ಜಾಗೃತಿ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ
Microfinance Awareness, Socio-Economic Development Workshop
ರಾಯಬಾಗ, 28 : ಆರ್ಥಿಕ ವಿಷಯಗಳ ಬಗ್ಗೆ ಜನರಿಗೆ ಉತ್ತಮ ಮಾಹಿತಿ ಮತ್ತು ತಿಳುವಳಿಕೆ ನೀಡುವುದು ಹಣಕಾಸು ಸಂಸ್ಥೆಗಳ ಕರ್ತವ್ಯವಾಗಿದೆ ಎಂದು ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ ಹೇಳಿದರು.
ಗುರುವಾರ ಪಟ್ಟಣದ ದತ್ತ ಮಂದಿರದಲ್ಲಿ ಮೈಕ್ರೋ ಫೈನಾನ್ಸ್ ಜಾಗೃತಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಸಾಲಗಾರರು ಸಾಲಗಳನ್ನು ಪಡೆಯುವಾಗ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಅವರು ಹಣಕಾಸು, ಜೀವನೋಪಾಯ, ಕುಟುಂಬ ಮತ್ತು ಸಾಮಾಜಿಕ ಭದ್ರತಾ ಅಂಶಗಳ ಕುರಿತು ಉತ್ತಮ ಮಾರ್ಗಗಳನ್ನು ಅನ್ವೇಷಿಸುತ್ತಾರೆ ಎಂದು ಹೇಳಿದರು.
ಮೈಕ್ರೋಫೈನಾನ್ಸ್ ಇಂಡಸ್ಟ್ರಿ ನೆಟ್ ವರ್ಕ ಉಪಾಧ್ಯಕ್ಷ ಮಂಜುನಾಥ ಎಮ್.ಎಸ್. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಆರ್ಥಿಕ ಸಾಕ್ಷರತೆ ಅತ್ಯಂತ ಮಹತ್ವದ್ದಾಗಿದೆ. ಮೈಕ್ರೋಫೈನಾನ್ಸ್ ಕಂಪನಿಗಳು ಭಾರತೀಯ ರಿಸರ್ವ ಬ್ಯಾಂಕ್ನಿಂದ ನಿಯಂತ್ರಿಸಲ್ಪಡುತ್ತವೆ ಎಂದು ತಿಳಿಸಿದರು.
ಹಣಕಾಸು ಸಾಕ್ಷರತಾ ಸಂಯೋಜಕ ಗುರುರಾಜ ಹಿರೇಮಠ, ಕ್ರೆಡಿಟ್ಆಕ್ಸೆಸ್ ಗ್ರಾಮೀಣ ಲಿ. ವಿಭಾಗೀಯ ವ್ಯವಸ್ಥಾಪಕ ಮಾದೇಗೌಡ ಸಿ., ವಿವಿಧ ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಿಬ್ಬಂದಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 