ಕ್ಷೀರ ಪೈಲಟ್ ಯೋಜನೆ ಚಾಲನಾ ಕಾರ್ಯಕ್ರಮ
Milk Pilot Project Implementation Program
ವಿಜಯಪುರ 07: ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ನಾಳೆ ನವೆಂಬರ್ 8 ರಂದು ಶನಿವಾರ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಶನಿವಾರ ಮಧ್ಯಾಹ್ನ 12.30 ಗಂಟೆಗೆ ನಗರದ ಬಿ.ಎಲ್.ಡಿ.ಇ ಸಂಸ್ಥೆ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿರುವ ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಸ್ಪತ್ರೆಯಲ್ಲಿ ಬೆಂಗಳೂರಿನ ಆಶ್ರಯ ಹಸ್ತಾ ಟ್ರಸ್ಟ್ ವತಿಯಿಂದ ರೂ.1.50 ಕೋಟಿ ಧನ ಸಹಾಯದಿಂದ ಹೈದರಾಬಾದನ ಸುಶೇನಾ ಹೆಲ್ತ್ ಫೌಂಡೇಶನ್ ಸಹಯೋಗದಲ್ಲಿ ನಿರ್ಮಿಸಿರುವ ಧಾತ್ರಿ ಹಾಲುಣಿಸುವಿಕೆ ನಿರ್ವಹಣೆ ಕೇಂದ್ರ ಮತ್ತು ಮಿಲ್ಕ್ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಧನ್ಯವಾದಗಳು.ಡಾ. ಮಹಾಂತೇಶ ಬಿರಾದಾರ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 