ಕೊಟ್ಟೂರು ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತ ಸಾಕ್ಷಿ
Millions of devotees witness the Kottoor Maharathotsavam
ಕೊಟ್ಟೂರು ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತ ಸಾಕ್ಷಿ
ಕೊಟ್ಟೂರು 23: ಕೊಟ್ಟೂರು ದೊರೆಯೇ ನಿನಗಾರು ಸರಿಯೇ.. ಸರಿ ಎಂದವರ ಹಲ್ಲು ಮುರಿಯೇ ಬಹುಪರಾಕ್ ಎನ್ನುವ ಲಕ್ಷಬಹುಪರಾಕ್ ಜಯಘೋಷದ ಮಧ್ಯೆ ಮಧ್ಯ ಕರ್ನಾಟಕದ ಆರಾಧ್ಯ ದೈವ ಕೊಟ್ಟೂರೇಶ್ವರನ ಸ್ಜಾಮಿ ರಥೋತ್ಸವ ಶನಿವಾರ ಸಂಜೆ 5.30ಕ್ಕೆ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ನಡೆಯಿತು. ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಬಂದಿದ್ದರು. ಶನಿವಾರ ಜರುಗಿದ ಸಂಭ್ರಮದ ರಥೋತ್ಸವನ್ನು ಕಣ್ಣುಂಬಿಸಿಕೊಂಡರು. ಬೆಳಗ್ಗಿನಿಂದಲೇ ಭಕ್ತರ ಸರದಿ ಸಾಲಿನಲ್ಲಿ ನಿಂತು ಸ್ವಾಮಿ ದರ್ಶನ ಪಡೆದರು. ವಿವಿಧ ವಾದ್ಯ ಮೇಳಗಳು ಸಮಾಳ, ನಂದಿಕೋಲು ರಥೋತ್ಸವಕ್ಕೆ ಮೆರಗು ತಂದವು. ಗುರು ಬಸವೇಶ್ವರ ಸ್ವಾಮಿಯ ಪಲ್ಲಕ್ಕೆ ರಥೋತ್ಸವದಲ್ಲಿ ಪ್ರತಿಷ್ಟಾಪನೆ ಮಾಡಲಾಯಿತು.ನಂತರ ಪೂಜೆ ಸಲ್ಲಿಸಿ ಮೂಲ ನಕ್ಷತ್ರ ಕೂಡಿ ಬಂದ ಮೇಲೆ ರಥ ಸಾಗಿತು. ದಾರಿ ಉದ್ದಕ್ಕೂ ಲಕ್ಷಾಂತರ ಭಕ್ತರು ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 