ಕೊಟ್ಟೂರು ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತ ಸಾಕ್ಷಿ
Millions of devotees witness the Kottoor Maharathotsavam
ಕೊಟ್ಟೂರು ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತ ಸಾಕ್ಷಿ
ಕೊಟ್ಟೂರು 23: ಕೊಟ್ಟೂರು ದೊರೆಯೇ ನಿನಗಾರು ಸರಿಯೇ.. ಸರಿ ಎಂದವರ ಹಲ್ಲು ಮುರಿಯೇ ಬಹುಪರಾಕ್ ಎನ್ನುವ ಲಕ್ಷಬಹುಪರಾಕ್ ಜಯಘೋಷದ ಮಧ್ಯೆ ಮಧ್ಯ ಕರ್ನಾಟಕದ ಆರಾಧ್ಯ ದೈವ ಕೊಟ್ಟೂರೇಶ್ವರನ ಸ್ಜಾಮಿ ರಥೋತ್ಸವ ಶನಿವಾರ ಸಂಜೆ 5.30ಕ್ಕೆ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ನಡೆಯಿತು. ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಬಂದಿದ್ದರು. ಶನಿವಾರ ಜರುಗಿದ ಸಂಭ್ರಮದ ರಥೋತ್ಸವನ್ನು ಕಣ್ಣುಂಬಿಸಿಕೊಂಡರು. ಬೆಳಗ್ಗಿನಿಂದಲೇ ಭಕ್ತರ ಸರದಿ ಸಾಲಿನಲ್ಲಿ ನಿಂತು ಸ್ವಾಮಿ ದರ್ಶನ ಪಡೆದರು. ವಿವಿಧ ವಾದ್ಯ ಮೇಳಗಳು ಸಮಾಳ, ನಂದಿಕೋಲು ರಥೋತ್ಸವಕ್ಕೆ ಮೆರಗು ತಂದವು. ಗುರು ಬಸವೇಶ್ವರ ಸ್ವಾಮಿಯ ಪಲ್ಲಕ್ಕೆ ರಥೋತ್ಸವದಲ್ಲಿ ಪ್ರತಿಷ್ಟಾಪನೆ ಮಾಡಲಾಯಿತು.ನಂತರ ಪೂಜೆ ಸಲ್ಲಿಸಿ ಮೂಲ ನಕ್ಷತ್ರ ಕೂಡಿ ಬಂದ ಮೇಲೆ ರಥ ಸಾಗಿತು. ದಾರಿ ಉದ್ದಕ್ಕೂ ಲಕ್ಷಾಂತರ ಭಕ್ತರು ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 