ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಸಚಿವ ಎಚ್‌.ಕೆ.ಪಾಟೀಲ ಅವರಿಂದ ಭೂಮಿ ಪೂಜೆ

 ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಸಚಿವ ಎಚ್‌.ಕೆ.ಪಾಟೀಲ ಅವರಿಂದ ಭೂಮಿ ಪೂಜೆ Minister H.K. Patil performs Bhoomi Puja for CC sewerage construction work

  ಗದಗ  26: ಗದಗನ ಪಂಚವಟಿ ನಾಗರಕಟ್ಟಿ ಸಮೀಪ ಗದಗ- ಬೆಟಗೇರಿ ನಗರಸಭೆ ವಾರ್ಡ ಸಂಖ್ಯೆ 34 ರಲ್ಲಿ  ಸಿ.ಸಿ. ಚರಂಡಿ ನಿರ್ಮಾಣ ಕಾಮಗಾರಿಗೆ  ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್‌.ಕೆ.ಪಾಟೀಲ ಅವರು ಭೂಮಿ ಪೂಜೆ ನೆರವರಿಸಿದರು. 

ಈ ಸಂದರ್ಭದಲ್ಲಿ  ವಿಧಾನ ಪರಿಷತ್ ಶಾಸಕ ಎಸ್‌.ವಿ.ಸಂಕನೂರ, ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ,  ನಗರಸಭಾ ಸದಸ್ಯೆ ವಿದ್ಯಾವತಿ ಗಡಗಿ  ಸೇರಿದಂತೆ  ಗಣ್ಯರು, ಹಿರಿಯರು ಹಾಜರಿದ್ದರು.