ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ
Minister M.B. Patil instructs officials to take necessary precautionary measures due to rain
ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ
ವಿಜಯಪುರ 6. ; ವಿಜಯಪುರ ಜಿಲ್ಲೆಯಲ್ಲಿ ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಮತ್ತು ವಿವಿಧ ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡು ಆಗಿರುವ ತೊಂದರೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದಿರುವ ಸಚಿವರು ದಿ.9 ಶನಿವಾರ ರಂದು ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಈ ಕುರಿತು ವಿಸ್ತೃತವಾಗಿ ಚರ್ಚಿಸಲಿದ್ದಾರೆ. ಮಳೆಯಿಂದ ಸೋರಿಕೆಯಾಗಿರುವ ಅಂಗವಾಡಿ ಮತ್ತು ಶಾಲಾ ಕಟ್ಟಡಗಳ ಕುರಿತು ಮಾಹಿತಿ ಪಡೆದು ಕೂಡಲೇ ಆ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 