ಸಚಿವರು, ಶಾಸಕರು ಹೋರಾಟಕ್ಕೆ ಬೆಂಬಲಿಸಿ ಸರ್ಕಾರಕ್ಕೆ ಒತ್ತಾಯಿಸಬೇಕು: ಹರೀಶ ಎಂಟಮಾನ
Ministers and MLAs should support the struggle and urge the government: Harish Antamana
ಆಲಮೇಲ, 17 : ಜಿಲ್ಲೆಯ ಇಬ್ಬರು ಸಚಿವರು ಮತ್ತು ಶಾಸಕರು ಪಕ್ಷಾತೀತವಾಗಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಹರೀಶ ಎಂಟಮಾನ ಆಗ್ರಹಿಸಿದರು.
ಮಂಗಳವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ವಿಜಯಪುರ ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಕಾಲೇಜು ಖಾಸಗೀಕರಣ ಕೈಬಿಟ್ಟು ಸರಕಾರಿ ವೈದ್ಯಕೀಯ ಕಾಲೇಜಾಗಿಯೆ ಪ್ರಾರಂಭಿಸಬೇಕು ಎಂದು ಕಳೆದ 90 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಅವರ ಹೋರಾಟಕ್ಕೆ ಜಿಲ್ಲೆಯ ವಿವಿದ ಸಂಘಟನೆಗಳು ಬೆಂಬಲಸಿವೆ ಹಾಗೆ ವಿವಿಧ ಸಂಘಟನೆಗಳಿಂದ ವಿನೂತನವಾಗಿ ಜಿಲ್ಲೆಯಾದ್ಯಂತ ಹೊರಾಟ ಮಾಡಿದ್ದು ಇದೆಲ್ಲವನ್ನು ಮನಗಂಡಂತ ಜಿಲ್ಲೆಯ ಸಚಿವರು, ಶಾಸಕರು ಹೋರಾಟಕ್ಕೆ ಬೆಂಬಲಿಸಿ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹಾಗೂ ಇನ್ನೋರ್ವ ಸಚಿವರಾದ ಶಿವಾನಂದ ಪಾಟೀಲ ಮತ್ತು ವಿಜಯಪುರ ನಗರ ಶಾಕ ಬಸನಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ಸರಕಾರಕ್ಕೆ ಒತ್ತಾಯಿಸಿ ಸರಕಾರಿ ವೈದ್ಯಕೀಯ ಕಾಲೇಜು ಆರಂಬಿಸಬೇಕು. ಒಂದು ವೇಳೆ ನಿಷ್ಕಾಳಜಿ ತೋರಿದರೆ ಜಿಲ್ಲೆಯ ಸಚಿವರು ಶಾಸಕರು ಹಾಗೂ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು. ನಿಜವಾಗಲೂ ಸರಕಾರಕ್ಕೆ, ಜಿಲ್ಲೆಯ ಜನಪ್ರತಿನಿಧಿಗಳಿಗೆ ಬಡ ಜನರ ಮೇಲೆ ಕಾಳಜಿ ಇದ್ದರೆ ಸರಕಾರಿ ವೈದ್ಯಕೀಯ ಕಾಲೇಜು ಪ್ರಾರಂಬಿಸಲು ಮುಂದಾಗಬೇಕು ಎಂದು ಹೆಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 