ಸಿಎಎ ಕುರಿತು ದಾರಿತಪ್ಪಿಸುವ ಮಾಹಿತಿ ಹಬ್ಬಿಸಲಾಗುತ್ತಿದೆ: ಪ್ರತಿಪಕ್ಷಗಳ ವಿರುದ್ಧ ಜೆಡಿ(ಯು) ಆಕ್ರೋಶ
ನವದೆಹಲಿ, ಫೆ 4 - ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಬೆಂಬಲಿಸಿರುವ ಜೆಡಿಯು ಸದಸ್ಯ ರಾಜೀವ್ ರಂಜನ್ ಸಿಂಗ್, ಹೊಸ ಕಾನೂನಿಗೆ ವಿರೋಧ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಾರೆ.
ಲೋಕಸಭೆಯಲ್ಲಿ ಮಂಗಳವಾರ ಸಂಸತ್ ನಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಂಗ್ ಅವರು, ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿದಾಗ ಯಾರೊಬ್ಬರೂ ವಿರೋಧಿಸಿರಲಿಲ್ಲ. ಆದರೆ, ಈಗ ಏಕೆ ವಿರೋಧಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.
ಸಿಎಎ ಕುರಿತು ದಾರಿ ತಪ್ಪಿಸುವ ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ಇನ್ನೂ ಅಸ್ತಿತ್ವಕ್ಕೆ ಬಾರದ ಎನ್ಆರ್ ಸಿಯನ್ನು ಸಿಎಎಗೆ ಏಕೆ ಜೋಡಿಸಲಾಗುತ್ತಿದೆ? ಎಂದು ಸಿಂಗ್ ಆಶ್ಚರ್ಯ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ‘ಸಬ್ ಕ ಸಾಥ್ -ಸಬ್ ಕ ವಿಕಾಸ್, ಸಬ್ ಕ ವಿಶ್ವಾಸ್ ಘೋಷಣೆಯನ್ನು ಉಲ್ಲೇಖಿಸಿದ ಅವರು, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಮತ್ತು ವಿಶೇಷ ಸ್ಥಾನಮಾನ ನೀಡುವಂತೆ ಮನವಿ ಮಾಡಿದರು.ದೇಶದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸುವಂತೆ ಸಿಂಗ್ ಒತ್ತಾಯಿಸಿದರು.ನ್ಯಾಷನಲ್ ಕಾನ್ಫರೆನ್ಸಸ್ ಸದಸ್ಯ ಹಸ್ನೈನ್ ಮಸೂದಿ ಸಹ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 