ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ?:ವಾಟಾಳ್ ಕರೆಗೆ ಮೌನ ಬೆಂಬಲ ನೀಡಿದ ಜನತೆ
Mixed reaction to Karnataka bandh?: People silently support Vatal's call
ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ?:ವಾಟಾಳ್ ಕರೆಗೆ ಮೌನ ಬೆಂಬಲ ನೀಡಿದ ಜನತೆ
ಕಾರವಾರ. 22; ಜಿಲ್ಲೆಯಲ್ಲಿ ಬಸ್ ಸಂಚಾರ ಎಂದಿನಂತೆಕಾರವಾರ : ಉತ್ತರ ಕನ್ನಡದಲ್ಲಿ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ವಾಟಾಳ್ ನಾಗರಾಜ್ ಅವರು ಎಂಇಎಸ್ ಕಾಟದ ವಿರುದ್ಧ ನೀಡಿದ ಬಂದ್ ಕರೆಗೆ ಉತ್ತರ ಕನ್ನಡದಲ್ಲಿ ಜನತೆ ಮೌನ ಬೆಂಬಲ ನೀಡಿದರು. ಯಾವುದೇ ಕನ್ನಡ ಸಂಘಟನೆಗಳು ಬಂದ್ ಸಂಬಂಧ ಪ್ರತಿಭಟನೆ, ಮೆರವಣಿಗೆ ಮಾಡದಿದ್ದರೂ ಸಹ, ಬಂದ್ ವಾತಾವರಣ ಕಂಡು ಬಂತು. ಕುಮಟಾ, ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ ಸೇರಿದಂತೆ ಘಟ್ಟದ ಮೇಲಿನ ತಾಲೂಕಿನಲ್ಲಿ ಜನ ಸಂಚಾರ ವಿರಳವಾಗಿತ್ತು. ಕಾರವಾರದಿಂದ ರಾಜ್ಯದ ಎಲ್ಲಾ ಪ್ರಮುಖ ಕೇಂದ್ರ ಗಳಿಗೆ ತೆರಳುವ ಬಸ್ ಬಸ್ ಗಳು ಎಂದಿನಂತೆ ಸಂಚರಿಸಿದವು. ನಾಲ್ಕನೇ ಶನಿವಾರ ಆದ ಕಾರಣ ಸರ್ಕಾರಿ ನೌಕರರ ಓಡಾಟ ಕಾಣಲಿಲ್ಲ. ಎಸ್ ಎಸ್ ಎಲ್ ಸಿ ಪರೀಕ್ಷೆ ಶನಿವಾರ ಇಲ್ಲದ ಕಾರಣ, ವಿದ್ಯಾರ್ಥಿಗಳ ಸಂಚಾರವೂ ಇರಲಿಲ್ಲ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳದಲ್ಲಿ ಹೋಟೆಲ್ ಅಂಗಡಿಗಳು ತೆರೆದ್ದವು. ಕರಾವಳಿಯಲ್ಲಿ ಬಸ್ ಸಂಚಾರ ಎಂದಿನಂತೆಯೇ ಇತ್ತು. ಅಂಗಡಿ ಮುಂಗಟ್ಟು ಮಧ್ಯಾಹ್ನದ ನಂತರ ತೆರೆದಿದ್ದವು . ಪೊಲೀಸ್ ಮೂಲಗಳ ಪ್ರಕಾರ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಮಾಹಿತಿ ನೀಡಿವೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 