ಕಳೆದ ಬಾರಿಗಿಂತಲೂ ಅಧಿಕ ಬಹುಮತ: ಶೆಟ್ಟರ ವಿಶ್ವಾಸ
ಘಟಪ್ರಭಾ 18: ದೇಶದಲ್ಲಿ ಪ್ರಧಾನಿ ಮೋದಿ ಅಲೆ ಬೀಸುತ್ತಿದ್ದು ಕಳೆದ ಬಾರಿ 2014 ರ ಚುನಾವಣೆಗಿಂತ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರು ಆಯ್ಕೆಯಾಗುತ್ತಾರೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಗುರುವಾರ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲು ತೆರಳುತ್ತುರುವ ಸಂದರ್ಭದಲ್ಲಿ ಅರಭಾಂವಿ ಮಠದ ಪ್ರಭುದೇವ ಪೆಟ್ರೋಲಿಯಂ ಹತ್ತಿರ ಸಮಾವೇಶಕ್ಕೆ ತೆರಳುತ್ತಿದ್ದ ಕಾರ್ಯಕರ್ತರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಅತಿ ಹೆಚ್ಚು ಸಂಸದರು ಆಯ್ಕೆಯಾಗುವ ಮೂಲಕ ಸಮ್ಮಿಶ್ರ ಸಕರ್ಾರ ಪತನಗೊಂಡು ಬಿಜೆಪಿ ಸಕರ್ಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ವಿಭಾಗ ಪ್ರಭಾರಿ ಈರಣ್ಣ ಕಡಾಡಿ ಮಾತನಾಡಿ, ಜಿಲ್ಲೆಯ ಬೆಳಗಾವಿ ಹಾಗೂ ಚಿಕ್ಕೋಡಿ ಸಂಸದರು ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗುತ್ತಾರೆ ಎಂದರು. ನೀಲಕಂಠ ಕಪ್ಪಲಗುದ್ದಿ, ಬಸವರಾಜ ಕಡಾಡಿ, ಬಸವರಾಜ ಹುಡೇದ, ಪರಪ್ಪ ಗಿರೆಣ್ಣವರ, ಪುಂಡಲಿಕ ಅರಭಾಂವಿ, ಕುಸುಮಾ ಖನಗಲ್ಲಿ, ಕೃಷ್ಣಪ್ಪ ಮುಂಡಿಗನಾಳ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 