ಶ್ರೀಯುತ ಚಿಕ್ಕಣ್ಣ ಬಿ ಎಸ್ ಇವರಿಗೆ ಪಿ ಎಚ್ ಡಿ ಪ್ರಧಾನ
Mr. Chikkanna B.S. has PhD principal
ಶ್ರೀಯುತ ಚಿಕ್ಕಣ್ಣ ಬಿ ಎಸ್ ಇವರಿಗೆ ಪಿ ಎಚ್ ಡಿ ಪ್ರಧಾನ
ಬ್ಯಾಡಗಿ 05 : ಇಲ್ಲಿನ ಹಂಸ ಬಾವಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾಗಿರುವ ಡಾ. ಚಿಕ್ಕಣ್ಣ. ಬಿ. ಎಸ್.ರವರಿಗೆ ಪಿಹೆಚ್.ಡಿ. ಪದವಿ ಲಬಿಸಿದೆ.ಮಾನ್ಯತಾ ಕೇಂದ್ರ: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಂಶೋಧನಾ ಕೇಂದ್ರದ ಮೂಲಕ ಶ್ರೀ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಬೆಂಗಳೂರು. ಇಲ್ಲಿ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ *ಡಾ.ಶೀಲಾದೇವಿ ಎಸ್. ಮಳೀಮಠ* ರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಸಾಹಿತ್ಯ ಪರಿಷತ್ತಿನ ಮೂಲಕ ಸಲ್ಲಿಸಿದ ಮಹಾಪ್ರಬಂಧ, *ಕನ್ನಡ ಖಂಡ ಕಾವ್ಯಗಳು ವಸ್ತು ಮತ್ತು ಆಶಯ* (ದಲಿತ/ಬಂಡಾಯ ಕಾಲಘಟ್ಟದ ಆಯ್ದ ಕವಿಗಳನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ *ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಹೆಚ್.ಡಿ. ಪದವಿ* ನೀಡಿದೆ. ಇವರು ತುಮಕೂರು ತಾಲ್ಲೂಕಿನ ಜಿ.ಬೊಮ್ಮನಹಳ್ಳಿಯ ಸಿದ್ದಗಂಗಯ್ಯ ಮತ್ತು ನರಸಮ್ಮ ದಂಪತಿಯ ಮಗನಾಗಿದ್ದು, ಕುಟುಂಬದ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿವರ್ಗ, ಸ್ನೇಹಿತರು ಮತ್ತು ವಿದ್ಯಾರ್ಥಿಗಳು ಶುಭಹಾರೈಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 