ಶ್ರೀಯುತ ಚಿಕ್ಕಣ್ಣ ಬಿ ಎಸ್ ಇವರಿಗೆ ಪಿ ಎಚ್ ಡಿ ಪ್ರಧಾನ
Mr. Chikkanna B.S. has PhD principal
ಶ್ರೀಯುತ ಚಿಕ್ಕಣ್ಣ ಬಿ ಎಸ್ ಇವರಿಗೆ ಪಿ ಎಚ್ ಡಿ ಪ್ರಧಾನ
ಬ್ಯಾಡಗಿ 05 : ಇಲ್ಲಿನ ಹಂಸ ಬಾವಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾಗಿರುವ ಡಾ. ಚಿಕ್ಕಣ್ಣ. ಬಿ. ಎಸ್.ರವರಿಗೆ ಪಿಹೆಚ್.ಡಿ. ಪದವಿ ಲಬಿಸಿದೆ.ಮಾನ್ಯತಾ ಕೇಂದ್ರ: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಂಶೋಧನಾ ಕೇಂದ್ರದ ಮೂಲಕ ಶ್ರೀ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಬೆಂಗಳೂರು. ಇಲ್ಲಿ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ *ಡಾ.ಶೀಲಾದೇವಿ ಎಸ್. ಮಳೀಮಠ* ರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಸಾಹಿತ್ಯ ಪರಿಷತ್ತಿನ ಮೂಲಕ ಸಲ್ಲಿಸಿದ ಮಹಾಪ್ರಬಂಧ, *ಕನ್ನಡ ಖಂಡ ಕಾವ್ಯಗಳು ವಸ್ತು ಮತ್ತು ಆಶಯ* (ದಲಿತ/ಬಂಡಾಯ ಕಾಲಘಟ್ಟದ ಆಯ್ದ ಕವಿಗಳನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ *ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಹೆಚ್.ಡಿ. ಪದವಿ* ನೀಡಿದೆ. ಇವರು ತುಮಕೂರು ತಾಲ್ಲೂಕಿನ ಜಿ.ಬೊಮ್ಮನಹಳ್ಳಿಯ ಸಿದ್ದಗಂಗಯ್ಯ ಮತ್ತು ನರಸಮ್ಮ ದಂಪತಿಯ ಮಗನಾಗಿದ್ದು, ಕುಟುಂಬದ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿವರ್ಗ, ಸ್ನೇಹಿತರು ಮತ್ತು ವಿದ್ಯಾರ್ಥಿಗಳು ಶುಭಹಾರೈಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 