ಮುದ್ದೇಬಿಹಾಳ: ರಾಷ್ಟ್ರೀಯ ಮತದಾರರ ದಿನ-ಜಾಗೃತಿ ಜಾಥಾ
Muddebihal: National Voter's Day-Awareness Jatha
ಮುದ್ದೇಬಿಹಾಳ: ರಾಷ್ಟ್ರೀಯ ಮತದಾರರ ದಿನ-ಜಾಗೃತಿ ಜಾಥಾ
ಮುದ್ದೇಬಿಹಾಳ 25: ರಾಷ್ಟ್ರೀಯ ಮತದಾರರ ದಿನ-2025 ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ ನಡೆಯಿತು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಗೃತ ಜಾಥಾಕ್ಕೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನಿಂಗಪ್ಪ ಎಸ್. ಮಸಳಿ ಅವರು ಚಾಲನೆ ನೀಡಿದರು.
ಜಾಗೃತ ಜಾಥಾವು ಕಿತ್ತೂರು ರಾಣಿ ಚೆನ್ನಮ್ನ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ತಲುಪಿತು. ಜಾಥಾದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಹಿಡಿದು ಶಾಲಾ ವಿದ್ಯಾರ್ಥಿಗಳು ಹೆಜ್ಜೆಹಾಕಿದರು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ, ಬಿಇಒ ಬಿ.ಎಸ್.ಸಾವಳಗಿ, ಕಾಲೇಜು ಪ್ರಾಂಶುಪಾಲ ಎಸ್.ಎಸ್.ಅಂಗಡಿ, ತಾ.ಪಂ.ಯೋಜನಾಧಿಕಾರಿ ಖೂಬಸಿಂಗ್ ಜಾಧವ್ ಹಾಗೂ ಅಧಿಕಾರಿಗಳು ಸಿಬ್ಬಂದಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 