ಮುದ್ದೇಬಿಹಾಳ: ರಾಷ್ಟ್ರೀಯ ಮತದಾರರ ದಿನ-ಜಾಗೃತಿ ಜಾಥಾ
Muddebihal: National Voter's Day-Awareness Jatha
ಮುದ್ದೇಬಿಹಾಳ: ರಾಷ್ಟ್ರೀಯ ಮತದಾರರ ದಿನ-ಜಾಗೃತಿ ಜಾಥಾ
ಮುದ್ದೇಬಿಹಾಳ 25: ರಾಷ್ಟ್ರೀಯ ಮತದಾರರ ದಿನ-2025 ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ ನಡೆಯಿತು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಗೃತ ಜಾಥಾಕ್ಕೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನಿಂಗಪ್ಪ ಎಸ್. ಮಸಳಿ ಅವರು ಚಾಲನೆ ನೀಡಿದರು.
ಜಾಗೃತ ಜಾಥಾವು ಕಿತ್ತೂರು ರಾಣಿ ಚೆನ್ನಮ್ನ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ತಲುಪಿತು. ಜಾಥಾದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಹಿಡಿದು ಶಾಲಾ ವಿದ್ಯಾರ್ಥಿಗಳು ಹೆಜ್ಜೆಹಾಕಿದರು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ಬಲರಾಮ ಕಟ್ಟಿಮನಿ, ಬಿಇಒ ಬಿ.ಎಸ್.ಸಾವಳಗಿ, ಕಾಲೇಜು ಪ್ರಾಂಶುಪಾಲ ಎಸ್.ಎಸ್.ಅಂಗಡಿ, ತಾ.ಪಂ.ಯೋಜನಾಧಿಕಾರಿ ಖೂಬಸಿಂಗ್ ಜಾಧವ್ ಹಾಗೂ ಅಧಿಕಾರಿಗಳು ಸಿಬ್ಬಂದಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 