ಮುಧೋಳರಿಗೆ ರಾಷ್ಟ್ರಪತಿ ಪದಕ ಸನ್ಮಾನ
ಲೋಕದರ್ಶನ ವರದಿ
ಸಂಕೇಶ್ವರ 28: ಜ. ಅಗ್ನಿಶಾಮಕ ಠಾಣಾ ಅಧಿಕಾರಿಗಳಾದ ಎಂ ಬಿ ಮುಧೋಳ ಇವರಿಗೆ ರಾಷ್ಟ್ರಪತಿ ಪದಕವನ್ನು ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಭವನದಲ್ಲಿ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರ ಹಸ್ತದಿಂದ ಪದಕ ಪ್ರಧಾನ ಮಾಡಿ ಗೌರವಿಸಲಾಯಿತು. ಸಂಕೇಶ್ವರ ಅಗ್ನಿಶಾಮಕ ಠಾಣೆಯ ವತಿಯಿಂದ ಸೋಮವಾರ ದಿ.28ರಂದು ಅಗ್ನಿಶಾಮಕ ಠಾಣೆಯ ಸಹಾಯಕ ಅಧಿಕಾರಿ ಆರ್ ಎಮ್ ಪುಜಾರಿ ಇವರು ಅಧಿಕಾರಿ ಎಂ.ಬಿ.ಮುಧೋಳ ಇವರಗೆ ಪುಷ್ಪಹಾರ ನೀಡಿ ಮತ್ತು ಸಿಬ್ಬಂದಿಗಳಿಂದ ಶಾಲ ಹಣ್ಣು ನೀಡಿ ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡುತ್ತ ಎಂ ಬಿ ಮುಧೋಳ ಅಗ್ನಿಶಾಮಕ ಜವಾನರು ತಮ್ಮ ಸೇವೆಯಲ್ಲಿ ಪ್ರಾಮಾಣಿಕ ದಕ್ಷತೆಯಿಂದ ಸೇವೆ ಸಲ್ಲಿಸಿ ಠಾಣೆಯ ಹೆಸರಿಗೆ ಗೌರವ ತರಬೇಕು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 