ಮುಧೋಳರಿಗೆ ರಾಷ್ಟ್ರಪತಿ ಪದಕ ಸನ್ಮಾನ
ಲೋಕದರ್ಶನ ವರದಿ
ಸಂಕೇಶ್ವರ 28: ಜ. ಅಗ್ನಿಶಾಮಕ ಠಾಣಾ ಅಧಿಕಾರಿಗಳಾದ ಎಂ ಬಿ ಮುಧೋಳ ಇವರಿಗೆ ರಾಷ್ಟ್ರಪತಿ ಪದಕವನ್ನು ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಭವನದಲ್ಲಿ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರ ಹಸ್ತದಿಂದ ಪದಕ ಪ್ರಧಾನ ಮಾಡಿ ಗೌರವಿಸಲಾಯಿತು. ಸಂಕೇಶ್ವರ ಅಗ್ನಿಶಾಮಕ ಠಾಣೆಯ ವತಿಯಿಂದ ಸೋಮವಾರ ದಿ.28ರಂದು ಅಗ್ನಿಶಾಮಕ ಠಾಣೆಯ ಸಹಾಯಕ ಅಧಿಕಾರಿ ಆರ್ ಎಮ್ ಪುಜಾರಿ ಇವರು ಅಧಿಕಾರಿ ಎಂ.ಬಿ.ಮುಧೋಳ ಇವರಗೆ ಪುಷ್ಪಹಾರ ನೀಡಿ ಮತ್ತು ಸಿಬ್ಬಂದಿಗಳಿಂದ ಶಾಲ ಹಣ್ಣು ನೀಡಿ ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡುತ್ತ ಎಂ ಬಿ ಮುಧೋಳ ಅಗ್ನಿಶಾಮಕ ಜವಾನರು ತಮ್ಮ ಸೇವೆಯಲ್ಲಿ ಪ್ರಾಮಾಣಿಕ ದಕ್ಷತೆಯಿಂದ ಸೇವೆ ಸಲ್ಲಿಸಿ ಠಾಣೆಯ ಹೆಸರಿಗೆ ಗೌರವ ತರಬೇಕು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 