ಯುವಕನ ಕೊಲೆ :ಚೀಲದಲ್ಲಿ ಮೃತ ದೇಹ ಪತ್ತೆ
Murder of a young man: Dead body found in a bag
ಲೋಕದರ್ಶನ ವರದಿ
ಹೂವಿನಹಡಗಲಿ 05: ಯುವಕನ ಕೊಲೆ ಮಾಡಿ, ದೇಹವನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಹಾಕಿದ ಪ್ರಕರಣ ತಾಲ್ಲೂಕಿನ ಬೀರಬ್ಬಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಕುರಿ ಕಾಯುವ ಕೆಲಸ ಮಾಡುತ್ತಿದ್ದ ಬೀರೇಶ (25) ಕಳೆದ ಎರಡು ವಾರಗಳಿಂದ ಕಾಣೆಯಾಗಿದ್ದರು. ಬುಧವಾರ ಸಂಜೆ ಬೀರೇಶ ಅವರ ಮನೆಯ ಹಿಂಭಾಗದಲ್ಲಿ ಮೃತ ದೇಹ ಪತ್ತೆಯಾಗಿದೆ. ಪ್ರಾಣಿ ಸತ್ತಿರುವ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಗಮನಿಸಿದಾಗ, ಒಂದು ಚೀಲ ಕಂಡು ಬಂದಿದ್ದು, ಅದನ್ನು ತೆರೆದಾಗ ಬೀರೇಶ ಅವರ ದೇಹದ ಭಾಗಗಳು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರು ಹಿರೇಹಡಗಲಿ ಪೊಲೀಸಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಎಸ್.ಜಾಹ್ನವಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಲ್ಲಪ್ಪ ಹೂಗಾರ ಹಾಗೂ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 