ಮುತ್ತಲಮರಿ: ರಸ್ತೆ ಅತಿಕ್ರಮಣ ತೆರವುಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ಹಳಿಯಾಳ: ಮುತ್ತಲಮರಿ ಗ್ರಾಮದಿಂದ ಕಿವಡೆಬೈಲ್ ಸಂಪರ್ಕ ರಸ್ತೆ ಅತಿಕ್ರಮಣವನ್ನು ತೆರವುಗೊಳಿಸಿ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆ ಊರಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮುತ್ತಲಮುರಿಯ ನೂರಾರು ರೈತರು ಸೋಮವಾರ ತಾಲೂಕ ಕಚೇರಿಗೆ ಬಂದು ತಮ್ಮ ಹೊಲಗಳಿಗೆ ತೆರಳುವ ರಸ್ತೆ ಸಮಸ್ಯೆಯ ಬಗ್ಗೆ ತಹಶೀಲ್ದಾರರಿಗೆ ವಿವರಿಸಿದರು. ಕಿವಡೆಬೈಲ್ ಭಾಗದಲ್ಲಿ ತಮ್ಮ ಊರಿನ ರೈತರ ಹೊಲ-ಗದ್ದೆಗಳಿವೆ. ನಿತ್ಯ ಹೊಲ-ಗದ್ದೆಗಳಿಗೆ ತೆರಳುವ ವಹಿವಾಟಿನ ರಸ್ತೆ ಖಾಸಗಿಯವರದ್ದು ಎಂದು ತಿಳಿದುಬಂದಿರುವುದರಿಂದ ಅವರು ಅದನ್ನು ಉಳುಮೆ ಮಾಡಿಕೊಂಡು ಗದ್ದೆಯನ್ನಾಗಿ ಪರಿವರ್ತಿಸಿದ್ದಾರೆ. ಇನ್ನೊಂದೆಡೆ ಸರಕಾರಿ ದಾಖಲೆಗಳ ಪ್ರಕಾರ ಇರುವ ರಸ್ತೆಯನ್ನು ಓರ್ವ ರೈತ ಅತಿಕ್ರಮಣ ಮಾಡಿಕೊಂಡಿದ್ದಾನೆ. ಪರಿಣಾಮ ಹೊಲಗಳಿಗೆ ತೆರಳುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ತಹಶೀಲ್ದಾರರು ಸಕರ್ಾರಿ ದಾಖಲೆಗಳಲ್ಲಿ ನಮೂದಾಗಿರುವಂತೆ ಅತಿಕ್ರಮಣಗೊಂಡ ಜಮೀನನ್ನು ಬಿಡಿಸಿಕೊಂಡು ಅದನ್ನು ರಸ್ತೆಯನ್ನಾಗಿ ಪರಿವತರ್ಿಸಿ ಜನರ ಓಡಾಟಕ್ಕೆ ಅನುವು ಮಾಡಿಕೊಡಬೇಕು ಎಂದು ತಹಶೀಲ್ದಾರರಿಗೆ ಕೋರಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 