ಮುತ್ತಲಮರಿ: ರಸ್ತೆ ಅತಿಕ್ರಮಣ ತೆರವುಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ಹಳಿಯಾಳ: ಮುತ್ತಲಮರಿ ಗ್ರಾಮದಿಂದ ಕಿವಡೆಬೈಲ್ ಸಂಪರ್ಕ ರಸ್ತೆ ಅತಿಕ್ರಮಣವನ್ನು ತೆರವುಗೊಳಿಸಿ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆ ಊರಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮುತ್ತಲಮುರಿಯ ನೂರಾರು ರೈತರು ಸೋಮವಾರ ತಾಲೂಕ ಕಚೇರಿಗೆ ಬಂದು ತಮ್ಮ ಹೊಲಗಳಿಗೆ ತೆರಳುವ ರಸ್ತೆ ಸಮಸ್ಯೆಯ ಬಗ್ಗೆ ತಹಶೀಲ್ದಾರರಿಗೆ ವಿವರಿಸಿದರು. ಕಿವಡೆಬೈಲ್ ಭಾಗದಲ್ಲಿ ತಮ್ಮ ಊರಿನ ರೈತರ ಹೊಲ-ಗದ್ದೆಗಳಿವೆ. ನಿತ್ಯ ಹೊಲ-ಗದ್ದೆಗಳಿಗೆ ತೆರಳುವ ವಹಿವಾಟಿನ ರಸ್ತೆ ಖಾಸಗಿಯವರದ್ದು ಎಂದು ತಿಳಿದುಬಂದಿರುವುದರಿಂದ ಅವರು ಅದನ್ನು ಉಳುಮೆ ಮಾಡಿಕೊಂಡು ಗದ್ದೆಯನ್ನಾಗಿ ಪರಿವರ್ತಿಸಿದ್ದಾರೆ. ಇನ್ನೊಂದೆಡೆ ಸರಕಾರಿ ದಾಖಲೆಗಳ ಪ್ರಕಾರ ಇರುವ ರಸ್ತೆಯನ್ನು ಓರ್ವ ರೈತ ಅತಿಕ್ರಮಣ ಮಾಡಿಕೊಂಡಿದ್ದಾನೆ. ಪರಿಣಾಮ ಹೊಲಗಳಿಗೆ ತೆರಳುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ತಹಶೀಲ್ದಾರರು ಸಕರ್ಾರಿ ದಾಖಲೆಗಳಲ್ಲಿ ನಮೂದಾಗಿರುವಂತೆ ಅತಿಕ್ರಮಣಗೊಂಡ ಜಮೀನನ್ನು ಬಿಡಿಸಿಕೊಂಡು ಅದನ್ನು ರಸ್ತೆಯನ್ನಾಗಿ ಪರಿವತರ್ಿಸಿ ಜನರ ಓಡಾಟಕ್ಕೆ ಅನುವು ಮಾಡಿಕೊಡಬೇಕು ಎಂದು ತಹಶೀಲ್ದಾರರಿಗೆ ಕೋರಲಾಯಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 