ಮೈಲಾರ ಜಾತ್ರೆ : ಭದ್ರಾ ಜಲಾಶಯದಿಂದ ನದಿಗೆ ನೀರು
Mylara Fair: Water from Bhadra Reservoir into the river
ಹೂವಿನಹಡಗಲಿ 18: ತಾಲ್ಲೂಕಿನ ಐತಿಹಾಸಿಕ ಸುಕ್ಷೇತ್ರಮೈಲಾರದಲ್ಲಿ ಫೆ.25ರಿಂದ 5ರವರೆಗೆ ನಡೆಯುವ ವಾರ್ಷಿಕ ಜಾತ್ರೆ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗಿದೆ.ಫೆ.04 ರಂದು ಜರುಗುವ ಮೈಲಾಲಿಂಗೇಶ್ವರ ಸ್ವಾಮಿ ಕಾರಣಿಕ ಮಹೋತ್ಸವದಲ್ಲಿ ನಾಡಿನ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಭದ್ರಾ ಜಲಾಶಯದಿಂದ ಒಂದು ವಾರಗಳ ಪ್ರತಿದಿನ 500 ಕ್ಯೂಸೆಕ್ನಂತೆ ನದಿಗೆ ನೀರು ಹರಿಸಲಾಗುತ್ತಿದೆ. ಮಳೆ ಕೊರತೆಯಿಂದ ಈ ಬಾರಿ ಬೇಸಿಗೆ ಮುನ್ನವೇ ನದಿಪಾತ್ರ ಬತ್ತಿ ಹೋಗಿತ್ತು. ಭದ್ರಾದಿಂದ ಹರಿಸಿದ ನೀರು ತಾಲ್ಲೂಕಿಗೆ ಜನ ಜಾನುವಾರು ಗಳಿಗೆ ಅನುಕೂಲ ವಾಗಿದೆ ಎನ್ನಲಾಗಿದೆ.ಜಾತ್ರೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ಭದ್ರಾ ಜಲಾಶಯದಿಂದ ಹರಿಸಿದ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಕಾರ್ಯೋನ್ಮುಖವಾಗಿದ್ದು, ನದಿ ತೀರದಲ್ಲಿ ರೈತರು ಅಳವಡಿಸಿರುವ ಮೋಟಾರ್ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಂಡಿದೆ.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 