ಮೈಲಾರ ಜಾತ್ರೆ : ಭದ್ರಾ ಜಲಾಶಯದಿಂದ ನದಿಗೆ ನೀರು
Mylara Fair: Water from Bhadra Reservoir into the river
ಹೂವಿನಹಡಗಲಿ 18: ತಾಲ್ಲೂಕಿನ ಐತಿಹಾಸಿಕ ಸುಕ್ಷೇತ್ರಮೈಲಾರದಲ್ಲಿ ಫೆ.25ರಿಂದ 5ರವರೆಗೆ ನಡೆಯುವ ವಾರ್ಷಿಕ ಜಾತ್ರೆ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗಿದೆ.ಫೆ.04 ರಂದು ಜರುಗುವ ಮೈಲಾಲಿಂಗೇಶ್ವರ ಸ್ವಾಮಿ ಕಾರಣಿಕ ಮಹೋತ್ಸವದಲ್ಲಿ ನಾಡಿನ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಭದ್ರಾ ಜಲಾಶಯದಿಂದ ಒಂದು ವಾರಗಳ ಪ್ರತಿದಿನ 500 ಕ್ಯೂಸೆಕ್ನಂತೆ ನದಿಗೆ ನೀರು ಹರಿಸಲಾಗುತ್ತಿದೆ. ಮಳೆ ಕೊರತೆಯಿಂದ ಈ ಬಾರಿ ಬೇಸಿಗೆ ಮುನ್ನವೇ ನದಿಪಾತ್ರ ಬತ್ತಿ ಹೋಗಿತ್ತು. ಭದ್ರಾದಿಂದ ಹರಿಸಿದ ನೀರು ತಾಲ್ಲೂಕಿಗೆ ಜನ ಜಾನುವಾರು ಗಳಿಗೆ ಅನುಕೂಲ ವಾಗಿದೆ ಎನ್ನಲಾಗಿದೆ.ಜಾತ್ರೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ಭದ್ರಾ ಜಲಾಶಯದಿಂದ ಹರಿಸಿದ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಕಾರ್ಯೋನ್ಮುಖವಾಗಿದ್ದು, ನದಿ ತೀರದಲ್ಲಿ ರೈತರು ಅಳವಡಿಸಿರುವ ಮೋಟಾರ್ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಂಡಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 