ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ
N.V. Hanumanthappa as Vice President of the Provincial Agricultural Cooperative Society
ಲೋಕದರ್ಶನ ವರದಿ
ಕಂಪ್ಲಿ 10: ತಾಲೂಕು ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ಅವಿರೋಧವಾಗಿ ಆಯ್ಕೆಗೊಂಡರು. ಇತ್ತೀಚೆಗೆ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಲ್ಲಿನ ಸಹಕಾರ ಸಂಘದ ಕಛೇರಿ ಆವರಣದಲ್ಲಿ ಇತ್ತೀಚೆಗೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಈ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆ ನೂತನ ಉಪಾಧ್ಯಕ್ಷರಾಗಿ ಹನುಮಂತಪ್ಪ ಇವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ(ಬಳ್ಳಾರಿ ಸಹಕಾರ ಇಲಾಖೆ) ಬಿ.ನಾಗರಾಜ ಘೋಷಿಸಿದರು.
ಪ್ರಕ್ರಿಯೆ ವೇಳೆ ಮುಖ್ಯ ಕಾರ್ಯನಿರ್ವಾಹಕ ವಿ.ಮಲ್ಲಿಕಾರ್ಜುನ, ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಎಸ್.ಲಿಂಗಪ್ಪ, ನಿರ್ದೇಶಕರಾದ ರಾಮಾಂಜಿನೇಯ, ಡಿ.ವಿ.ಮಂಜುನಾಥ, ಎಸ್.ವೆಂಕಟೇಶ, ಎನ್.ಮರಿಸ್ವಾಮಿ, ಹೆಚ್.ದಾನಪ್ಪ, ಕೆ.ತಿಮ್ಮಯ್ಯ, ವಲಿಮಸೀದಿ ಇದ್ದರು. ನಂತರ ನೂತನ ಉಪಾಧ್ಯಕ್ಷರಿಗೆ ಮಾಲಾರೆ್ಣಯೊಂದಿಗೆ ಗೌರವಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಹಕಾರ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 