ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ
N.V. Hanumanthappa as Vice President of the Provincial Agricultural Cooperative Society
ಲೋಕದರ್ಶನ ವರದಿ
ಕಂಪ್ಲಿ 10: ತಾಲೂಕು ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ಅವಿರೋಧವಾಗಿ ಆಯ್ಕೆಗೊಂಡರು. ಇತ್ತೀಚೆಗೆ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಲ್ಲಿನ ಸಹಕಾರ ಸಂಘದ ಕಛೇರಿ ಆವರಣದಲ್ಲಿ ಇತ್ತೀಚೆಗೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಈ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆ ನೂತನ ಉಪಾಧ್ಯಕ್ಷರಾಗಿ ಹನುಮಂತಪ್ಪ ಇವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ(ಬಳ್ಳಾರಿ ಸಹಕಾರ ಇಲಾಖೆ) ಬಿ.ನಾಗರಾಜ ಘೋಷಿಸಿದರು.
ಪ್ರಕ್ರಿಯೆ ವೇಳೆ ಮುಖ್ಯ ಕಾರ್ಯನಿರ್ವಾಹಕ ವಿ.ಮಲ್ಲಿಕಾರ್ಜುನ, ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಎಸ್.ಲಿಂಗಪ್ಪ, ನಿರ್ದೇಶಕರಾದ ರಾಮಾಂಜಿನೇಯ, ಡಿ.ವಿ.ಮಂಜುನಾಥ, ಎಸ್.ವೆಂಕಟೇಶ, ಎನ್.ಮರಿಸ್ವಾಮಿ, ಹೆಚ್.ದಾನಪ್ಪ, ಕೆ.ತಿಮ್ಮಯ್ಯ, ವಲಿಮಸೀದಿ ಇದ್ದರು. ನಂತರ ನೂತನ ಉಪಾಧ್ಯಕ್ಷರಿಗೆ ಮಾಲಾರೆ್ಣಯೊಂದಿಗೆ ಗೌರವಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಸಹಕಾರ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 