ದೇಶದ ಋಣ ತೀರಿಸಲು ಎನ್.ಎಸ್.ಎಸ್. ಪ್ರೇರಕ ಶಕ್ತಿ : ಲಟ್ಟ್ಟಿ
NSS is the driving force to pay off the country's debt: Latti
ಲೋಕದರ್ಶನ ವರದಿ
ಗೋಕಾಕ 10 : ಭೂಮಿಗೆ ಬಂದ ಪ್ರತಿಯೊಬ್ಬ ಮನುಷ್ಯ ಈ ಮೂರು ಋಣಗಳನ್ನು ತಿರಿಸಬೇಕಾಗುತ್ತದೆ. ಒಂದನೆಯದಾಗಿ ಮಾತಾ-ಪಿತೃ ಋಣ, ಎರಡನೆಯದಾಗಿ ಗುರುವಿನ ಋಣ ಹಾಗೂ ಮೂರನೆಯದಾಗಿ ದೇಶದ ಋಣ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಈ ಮೂರು ಋಣಗಳನ್ನು ತೀರಿಸಿ ಸಾರ್ಥಕ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವೆಂದು ಪ್ರೌಢ ಶಾಲಾ ನಿವೃತ್ತ ಶಿಕ್ಷಕ ಪಿ.ಟಿ. ಲಟ್ಟಿ ಅವರು ನುಡಿದರು. ಅವರು ಗೋಕಾಕದ ಜೆ. ಎಸ್. ಎಸ್. ಪದವಿ ಮಹಾವಿದ್ಯಾಲಯ ದತ್ತು ಗ್ರಾಮ ಬೆಣಚಿನಮರಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಬಿ. ಎಂ. ತುರಡಗಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಎನ್.ಎಸ್.ಎಸ್. ಕಾರ್ಯ ಚಟುವಟಿಕೆಗಳ ಪ್ರಾಮುಖ್ಯತೆಯ ಕುರಿತು ತಿಳಿಸಿದರು. ಗ್ರಾಮದ ಹಿರಿಯರಾದ ಬಾಳೇಶ ಗಿಡ್ನವರ, ಮಂಜುನಾಥ ಗಿಡ್ನವರ, ಮಲ್ಲಪ್ಪಾ ಅಳಗುಂಡಿ ಬಸವರಾಜ ಮ್ಯಾಕಲಮರಡಿ ಹಾಗೂ ಮಹಾವಿದ್ಯಾಲಯದ ಡಾ. ಕೆ. ಆಯ್. ಇಂಡಿಕಾರ, ಡಾ. ವಿಜಯಕುಮಾರ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಎಮ್.ವ್ಹಿ. ಗೊರಗುದ್ದಿ ಸ್ವಾಗತಿಸಿದರು. ಇನ್ನೋರ್ವ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಸಿ.ಎ. ಮಸರಗುಪ್ಪಿ ವಂದಿಸಿದರು. ಕು. ಲಕ್ಷ್ಮೀ ಬಾಗಾಡಿ ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 