ನಾಗೇಶ್ ಜೆ. ಅವರಿಗೆ ರಾಯಣ್ಣ ಬರಹ ಮಾಣಿಕ್ಯ ರಾಜ್ಯ ಪ್ರಶಸ್ತಿ ಪ್ರದಾನ
Nagesh J. presented with Rayanna Baraha Manikya State Award
ನಾಗೇಶ್ ಜೆ. ಅವರಿಗೆ ರಾಯಣ್ಣ ಬರಹ ಮಾಣಿಕ್ಯ ರಾಜ್ಯ ಪ್ರಶಸ್ತಿ ಪ್ರದಾನ
ಸವದತ್ತಿ, 01 : ಪಟ್ಟಣದ ಶಿವಬಸವ ನಗರದ ಶಿಕ್ಷಕ, ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರಿಗೆ ರಾಜ್ಯಮಟ್ಟದ ‘ರಾಯಣ್ಣ ಬರಹ ಮಾಣಿಕ್ಯ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ವಿಶ್ವ ಬಂಜಾರ ಕಲಾ ಸಾಹಿತ್ಯಿಕ ಸಂಘ ಅಮೀನಗಡದ ಬರಹವೇ ಶಕ್ತಿ ವೇದಿಕೆ ವತಿಯಿಂದ ಸೃಜನಶೀಲ ಬರಹಗಾರರಿಗೆ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿ ಇದಾಗಿದ್ದು, ನಾಗೇಶ್ ನಾಯಕ ಅವರ ಸಾಹಿತ್ಯಿಕ ಸಾಧನೆಗೆ ಸಂದ ಗೌರವವಾಗಿದೆ. ಇತ್ತೀಚೆಗೆ ಬೈಲಹೊಂಗಲದ ಹೊಂಗನಸು ನಿಲಯದಲ್ಲಿ ಬರಹವೇ ಶಕ್ತಿ ವೇದಿಕೆಯ ರಾಜ್ಯಘಟಕದ ಪ್ರದಾನ ಕಾರ್ಯದರ್ಶಿಯಾದ ಮಂಜುಳಾ ಶೆಟ್ಟರ ನಾಗೇಶ್ ಜೆ. ನಾಯಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ರಾಜು ಹಕ್ಕಿ, ಯುವಕವಿಗಳಾದ ಬಸವರಾಜ ಪತ್ತಾರ ಉಪಸ್ಥಿತರಿದ್ದರು.
ಕಳೆದ 25 ವರ್ಷಗಳಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರವಣಿಗೆ ಮಾಡುತ್ತಿರುವ ನಾಗೇಶ್ ನಾಯಕ 27 ಕೃತಿಗಳನ್ನು ರಚಿಸಿದ್ದಾರೆ. ದಸರಾ ಉತ್ಸವ, ರನ್ನ ಉತ್ಸವ, ಕಿತ್ತೂರು ಉತ್ಸವ, ಹಂಪಿ ಉತ್ಸವ, ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ದೂರದರ್ಶನ, ರೇಡಿಯೋ ಕಾರ್ಯಕ್ರಮ ಸೇರಿದಂತೆ ನಾಡಿನ ಅನೇಕ ಕಡೆಗಳಲ್ಲಿ ಕವಿತೆ ವಾಚನ ಮಾಡಿದ್ದಾರೆ. ನಾಡಿನ ಪ್ರತಿಷ್ಠಿತ ಅಮ್ಮ ಪ್ರಶಸ್ತಿ ಸೇರಿದಂತೆ ಅನೇಕ ಪುಸ್ತಕ ಬಹುಮಾನ, ಗೌರವ ಪುರಸ್ಕಾರಗಳು ಸಂದಿವೆ. ಚಂದನ ಬೆಳಗು, ಶುಭೋದಯ ಕಾರ್ಯಕ್ರಮದ ನೇರ ಸಂದರ್ಶನದಲ್ಲಿ ಪಾಲ್ಗೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 