ನಂದಿಹಳ್ಳಿ : ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ
Nandihalli: Kanthi Basaveshwara Swamy Chariot Festival
ಹೂವಿನಹಡಗಲಿ 25: ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ ಗುರುವಾರ ಸಂಜೆ ವಿಜೃಂಭಣೆಯಿಂದ ಜರುಗಿತು.ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಗೊಂಬೆ ಕುಣಿತ ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಇದಕ್ಕೂ ಮುನ್ನ ಜರುಗಿದ ನಿಶಾನೆ ಹರಾಜಿನಲ್ಲಿ ಕಂಠಿ ಯುವರಾಜ 1.60 ಲಕ್ಷಕ್ಕೆ ಸ್ವಾಮಿಯ ಪಟ ಪಡೆದರು. ಕಂಠಿಬಸವೇಶ್ವರ ಟ್ರಸ್ಟ್ ಕಮಿಟಿ ಅದ್ಯಕ್ಷ ವಿ.ಬಿ.ಕರಿಬಸವರಾಜ ಪದಾಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು. ನಂದಿಹಳ್ಳಿ ಸುತ್ತಮುತ್ತಲ ಗ್ರಾಮಗಳ ಅಪಾರ ಜನರು ಭಾಗವಹಿಸಿದ್ದರು. ಬುಧವಾರ ಕಂಠಿ ಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಸಂಭ್ರಮದಿಂದ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 